Featured

ಬಸ್ ಪ್ರಯಾಣ ದರ ಏರಿಕೆ: ಮಹಿಳೆಯರಿಗೆ ಉಚಿತ ಪುರುಷರಿಗೆ ಹೊರೆ ಖಚಿತ’ :  ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕಿಡಿ – vishwanews24

ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಂತಾಗಿದೆ : ಬಿ.ವೈ ವಿಜಯೇಂದ್ರ

ಬೆಂಗಳೂರು: ‘ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ’ ಎಂಬುದನ್ನು ಇದೀಗ ಶೇ 15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ? ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ’ ಎಂಬುದನ್ನು ಇದೀಗ ಶೇ 15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ. ಶಕ್ತಿ ಯೋಜನೆ ಹೇಗಾಗಿದೆ ಎಂದರೆ ‘ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆಗೆ ಮಳಿಗೆಗಳಲ್ಲಿ ಒಂದು ಖರೀದಿಸಿದರೆ-ಒಂದು ಉಚಿತ ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದೆ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ದನಿ ಎತ್ತಲಿದೆ ಎಂದು ಹರಿಹಾಯ್ದಿದ್ದಾರೆ.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

7 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

42 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

54 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago