ಬೆಂಗಳೂರು: ‘ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ’ ಎಂಬುದನ್ನು ಇದೀಗ ಶೇ 15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ? ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.
‘ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ’ ಎಂಬುದನ್ನು ಇದೀಗ ಶೇ 15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ. ಶಕ್ತಿ ಯೋಜನೆ ಹೇಗಾಗಿದೆ ಎಂದರೆ ‘ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆಗೆ ಮಳಿಗೆಗಳಲ್ಲಿ ಒಂದು ಖರೀದಿಸಿದರೆ-ಒಂದು ಉಚಿತ ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದೆ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ದನಿ ಎತ್ತಲಿದೆ ಎಂದು ಹರಿಹಾಯ್ದಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…