ಹುಬ್ಬಳ್ಳಿ, : ಬಸ್ ಮೇಲ್ಛಾವಣಿ ಸೋರದಿದ್ದರೂ ಕೊಡೆ ಹಿಡಿದು ಬಸ್ ಚಾಲನೆ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ನಿರ್ವಾಹಕಿ ಅಮಾನತಾಗಿದ್ದಾರೆ. ಚಾಲಕ ಹನುಮಂತಪ್ಪ ಕಿಲ್ಲೇದಾರ ಹಾಗೂ ನಿರ್ವಾಹಕಿ ಅನಿತಾ ಎಚ್. ಅಮಾನತಾದವರು. ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ತಂದೊಡ್ಡಿದೆ.
ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು.ಬಸ್ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್ನ ವಾಸ್ತವತೆ ಕುರಿತು ವರದಿ ನೀಡಲು ವಿಭಾಗೀಯ ತಾಂತ್ರಿಕ ಶಿಲ್ಪಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು.
“ವಿಡಿಯೋ ಚಿತ್ರೀಕರಣವನ್ನು ಮೇ 23ರಂದು ಮಾಡಿದ್ದಾರೆ. ನಮ್ಮ ಗಮನಕ್ಕೆ 24ರಂದು ಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ವಾಹನ ಪರಿಶೀಲನೆಗೆ ಸೂಚಿಸಿದ್ದೆ. ವಾಹನದಲ್ಲಿ ಅಂತಹ ನ್ಯೂನತೆ ಇರಲಿಲ್ಲ ಎಂದು ವರದಿ ನೀಡಿದ್ದಾರೆ. ಚಾಲಕನನ್ನು ಕರೆಯಿಸಿ ವಿಚಾರಿಸಿದಾಗ ಮನರಂಜನೆಗಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೈಲಿ ಛತ್ರಿ ಹಿಡಿದು ವಾಹನ ಚಾಲನೆ ಮಾಡುವುದನ್ನು ಚಿತ್ರೀಕರಿಸೊಕ್ಕೆ ನಿರ್ವಾಹಕಿ ಸಾಥ್ ಕೊಟ್ಟಿದ್ದಾರೆ.ಇದೆಲ್ಲದರ ಹಿಂದೆ ಸಮಸ್ಯೆ ತೋರಿಸುವುದಕ್ಕಿಂತ ಹೆಚ್ಚಾಗಿ ಸಂಸ್ಥೆ ಮಾನ ಹರಾಜು ಹಾಕುವ ದುರುದ್ದೇಶ ಅಡಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.ಇದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ( ನಡತೆ ಮತ್ತು ಶಿಸ್ತು) ನಿಬಂಧನೆಗಳು-1971 ರ 18ನೆ ನಿಬಂಧನೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತೆ ಎಂದು ವಿಭಾಗಿಯ ನಿಯಂತ್ರಣಾಧಿಕಾರಿಗಳು( ಶಿಸ್ತು ಪಾಲನಾಧಿಕಾರಿ) ತಿಳಿಸಿರುವುದಲ್ಲದೇ ತತ್ ಕ್ಷಣಕ್ಕೆ ಅನ್ವಯವಾಗುವಂತೆ ಇಬ್ಬರನ್ನೂ ಕರ್ತವ್ಯಲೋಪದ ಆಪಾದನೆ ಮೇರೆಗೆ ಅಮಾನತುಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…