Featured

ಬಸ್‌ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಸಾರಿಗೆ ಬಸ್‌ ಚಾಲಕ, ನಿರ್ವಾಹಕಿ ಅಮಾನತು – vishwanews24

ಬಸ್‌ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಸಾರಿಗೆ ಬಸ್‌ ಚಾಲಕ, ನಿರ್ವಾಹಕಿ ಅಮಾನತು

ಹುಬ್ಬಳ್ಳಿ, : ಬಸ್‌ ಮೇಲ್ಛಾವಣಿ ಸೋರದಿದ್ದರೂ ಕೊಡೆ ಹಿಡಿದು ಬಸ್‌ ಚಾಲನೆ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ನಿರ್ವಾಹಕಿ ಅಮಾನತಾಗಿದ್ದಾರೆ. ಚಾಲಕ ಹನುಮಂತಪ್ಪ ಕಿಲ್ಲೇದಾರ ಹಾಗೂ ನಿರ್ವಾಹಕಿ ಅನಿತಾ ಎಚ್. ಅಮಾನತಾದವರು. ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ತಂದೊಡ್ಡಿದೆ.

ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್‌ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು.ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌ನ ವಾಸ್ತವತೆ ಕುರಿತು ವರದಿ ನೀಡಲು ವಿಭಾಗೀಯ ತಾಂತ್ರಿಕ ಶಿಲ್ಪಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್‌ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು.

“ವಿಡಿಯೋ ಚಿತ್ರೀಕರಣವನ್ನು ಮೇ 23ರಂದು ಮಾಡಿದ್ದಾರೆ. ನಮ್ಮ ಗಮನಕ್ಕೆ 24ರಂದು ಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ವಾಹನ ಪರಿಶೀಲನೆಗೆ ಸೂಚಿಸಿದ್ದೆ. ವಾಹನದಲ್ಲಿ ಅಂತಹ ನ್ಯೂನತೆ ಇರಲಿಲ್ಲ ಎಂದು ವರದಿ ನೀಡಿದ್ದಾರೆ. ಚಾಲಕನನ್ನು ಕರೆಯಿಸಿ ವಿಚಾರಿಸಿದಾಗ ಮನರಂಜನೆಗಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೈಲಿ ಛತ್ರಿ ಹಿಡಿದು ವಾಹನ ಚಾಲನೆ ಮಾಡುವುದನ್ನು ಚಿತ್ರೀಕರಿಸೊಕ್ಕೆ ನಿರ್ವಾಹಕಿ ಸಾಥ್ ಕೊಟ್ಟಿದ್ದಾರೆ.ಇದೆಲ್ಲದರ ಹಿಂದೆ ಸಮಸ್ಯೆ ತೋರಿಸುವುದಕ್ಕಿಂತ ಹೆಚ್ಚಾಗಿ ಸಂಸ್ಥೆ ಮಾನ ಹರಾಜು ಹಾಕುವ ದುರುದ್ದೇಶ ಅಡಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.ಇದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ( ನಡತೆ ಮತ್ತು ಶಿಸ್ತು) ನಿಬಂಧನೆಗಳು-1971 ರ 18ನೆ ನಿಬಂಧನೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತೆ ಎಂದು ವಿಭಾಗಿಯ ನಿಯಂತ್ರಣಾಧಿಕಾರಿಗಳು( ಶಿಸ್ತು ಪಾಲನಾಧಿಕಾರಿ) ತಿಳಿಸಿರುವುದಲ್ಲದೇ ತತ್ ಕ್ಷಣಕ್ಕೆ ಅನ್ವಯವಾಗುವಂತೆ ಇಬ್ಬರನ್ನೂ ಕರ್ತವ್ಯಲೋಪದ ಆಪಾದನೆ ಮೇರೆಗೆ ಅಮಾನತುಪಡಿಸಿದ್ದಾರೆ.

Vishwa News 24

Recent Posts

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

36 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago