ಮಂಗಳೂರು: ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಂಘದ ಹಿರಿಯರು ಸೂಚಿಸಿದ್ರೆ ಸ್ಪರ್ಧೆ ಮಾಡುತ್ತೇನೆ. ಆದರೆ ಆಗ ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ವೋಟ್ ಬೇಡ. ನನಗೆ ಕೇವಲ ಹಿಂದೂಗಳ ವೋಟ್ ಅಷ್ಟೇ ಸಾಕು. ಯಾಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು. ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು. ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಹೀಗಾಗಿ ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ ಎಂದು ತುಳು ಭಾಷೆಯಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಗುಡುಗಿದ್ದಾರೆ.
ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೀವಿ ಎಂದು ಹೇಳಿರುವ ಭಾಷಣದ ತುಣುಕುಗಳು ಭಾರೀ ವೈರಲ್ ಆಗಿದೆ. ಇದೀಗ ಈ ಹೇಳಿಕೆ ಮುಂದಿನ ಚುನಾವಣೆಯಲ್ಲಿ ಅವರ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಮಾತುಗಳು ಕೇಳಿಬರುತ್ತಿದೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…