ಬೆಂಗಳೂರು, : ಹಲಾಲ್ ಹೂಡಿಕೆ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಹೊಸದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದುಬೈನಲ್ಲಿ ತಲೆಮರೆಸಿಕೊಂಡಿದ್ದ ಮನ್ಸೂರ್ ಖಾನ್ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯರಾತ್ರಿ 1.50 ಕ್ಕೆ ಮನ್ಸೂರ್ನನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಆತನನ್ನು ವಶಕ್ಕೆ ತೆಗೆದುಕೊಂಡು ರಕ್ಷಣೆ ನೀಡಿರುವ ಎಸ್ಐಟಿ ತಂಡ ದಿಲ್ಲಿಯಲ್ಲೇ ಬೀಡು ಬಿಟ್ಟಿದೆ. ಸದ್ಯ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿರುವ ಎಸ್ಐಟಿ ಶೀಘ್ರವೇ ಆತನನ್ನು ಬೆಂಗಳೂರಿಗೆ ಕರೆ ತರುವ ನಿರೀಕ್ಷೆಯಿದೆ. ಎಸ್ಐಟಿ ಮನ್ಸೂರ್ ಖಾನ್ ವಿರುದ್ಧ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿತ್ತು.
ದುಬೈನಲ್ಲಿ ಅಡಗಿಕೊಂಡು ಅಲ್ಲಿಂದಲೇ ವೀಡಿಯೊ ಸಂದೇಶಗಳನ್ನು ಬಿಡುಗಡೆ ಮಾಡುತ್ತಿದ್ದ ಮನ್ಸೂರ್, ತನಗೆ ರಕ್ಷಣೆ ನೀಡುವುದಾದಲ್ಲಿ 24 ಗಂಟೆಯೊಳಗೆ ಭಾರತಕ್ಕೆ ವಾಪಸ್ ಬರುವುದಾಗಿ ಮೊನ್ನೆಯಷ್ಟೇ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದ. ಅದರಂತೆ, ರಕ್ಷಣೆ ಕೊಡುತ್ತೇವೆ ಎಂದು ಆತನಿಗೆ ಭರವಸೆ ನೀಡಿ ಭಾರತಕ್ಕೆ ಬರಲು ಸಿಟ್ ಸೂಚಿಸಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…