ಬೆಂಗಳೂರು, : ಹಲಾಲ್ ಹೂಡಿಕೆ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಹೊಸದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದುಬೈನಲ್ಲಿ ತಲೆಮರೆಸಿಕೊಂಡಿದ್ದ ಮನ್ಸೂರ್ ಖಾನ್ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯರಾತ್ರಿ 1.50 ಕ್ಕೆ ಮನ್ಸೂರ್ನನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಆತನನ್ನು ವಶಕ್ಕೆ ತೆಗೆದುಕೊಂಡು ರಕ್ಷಣೆ ನೀಡಿರುವ ಎಸ್ಐಟಿ ತಂಡ ದಿಲ್ಲಿಯಲ್ಲೇ ಬೀಡು ಬಿಟ್ಟಿದೆ. ಸದ್ಯ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿರುವ ಎಸ್ಐಟಿ ಶೀಘ್ರವೇ ಆತನನ್ನು ಬೆಂಗಳೂರಿಗೆ ಕರೆ ತರುವ ನಿರೀಕ್ಷೆಯಿದೆ. ಎಸ್ಐಟಿ ಮನ್ಸೂರ್ ಖಾನ್ ವಿರುದ್ಧ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿತ್ತು.
ದುಬೈನಲ್ಲಿ ಅಡಗಿಕೊಂಡು ಅಲ್ಲಿಂದಲೇ ವೀಡಿಯೊ ಸಂದೇಶಗಳನ್ನು ಬಿಡುಗಡೆ ಮಾಡುತ್ತಿದ್ದ ಮನ್ಸೂರ್, ತನಗೆ ರಕ್ಷಣೆ ನೀಡುವುದಾದಲ್ಲಿ 24 ಗಂಟೆಯೊಳಗೆ ಭಾರತಕ್ಕೆ ವಾಪಸ್ ಬರುವುದಾಗಿ ಮೊನ್ನೆಯಷ್ಟೇ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದ. ಅದರಂತೆ, ರಕ್ಷಣೆ ಕೊಡುತ್ತೇವೆ ಎಂದು ಆತನಿಗೆ ಭರವಸೆ ನೀಡಿ ಭಾರತಕ್ಕೆ ಬರಲು ಸಿಟ್ ಸೂಚಿಸಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…