Featured

ಬಹುದಿನಗಳ ಕನಸು ನನಸು : ಕೇರಳದ ಮುಸ್ಲಿಂ ಯುವತಿಯಿಂದ ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ -Vishwanews24

ಬಹುದಿನಗಳ ಕನಸು ನನಸು : ಕೇರಳದ ಮುಸ್ಲಿಂ ಯುವತಿಯಿಂದ ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ -Vishwanews24

ತಿರುವನಂತಪುರಂ: ದೇವರನಾಡು ಕೇರಳದ ಮುಸ್ಲಿಂ ಯುವತಿ ಜಸ್ನಾ ಸಲೀಂ ಅವರ ಬಹುದಿನಗಳ ಕನಸು ಈಡೇರಿದೆ.

ಕಳೆದ ಕೆಲ ವರ್ಷಗಳ ಹಿಂದೆ ಯುವತಿ ಜಸ್ನಾ ಅವರ ಹೆಸರು ಎಲ್ಲೆಡೆ ಕೇಳಿ ಬಂದಿತ್ತು. ಅದಕ್ಕೆ ಕಾರಣ ಅವರು ಬಿಡಿಸಿದ ವರ್ಣರಂಜಿತವಾದ ಚಿತ್ರಗಳಾಗಿವೆ. ದೇವರ ಭಾವಚಿತ್ರಗಳ ಪೆಂಟಿಂಗ್ ಈಕೆಗೆ ಅಚ್ಚುಮೆಚ್ಚು. ಕಳೆದ 6 ವರ್ಷಗಳಲ್ಲಿ ಸುಮಾರು 500ಕ್ಕೂ ಹೆಚ್ಚು ವಿವಿಧ ದೇವರ ಕಲಾಕೃತಿಗಳನ್ನು ಕುಂಚದಲ್ಲಿ ಅರಳಿಸಿದ್ದಾರೆ.

ತರಬೇತಿ ಪಡೆಯದೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುವ ಜಸ್ನಾ ಅವರಿಗೆ ಬಹುದಿನಗಳ ಆಸೆಯೊಂದಿತ್ತು. ಅದು ಇದೀಗ ಈಡೇರಿದೆ. ಇದುವರೆಗೆ ಅವರು ರಚಿಸಿದ ಚಿತ್ರಗಳನ್ನು ಹಿಂದೂ ದೇವರುಗಳ ಭಾವಚಿತ್ರಗಳೇ ಹೆಚ್ಚು. ತಾವು ಮಾಡಿದ ಕೃಷ್ಣನ ಪೆಂಟಿಂಗ್‍ನ್ನು ದೇವಸ್ಥಾನಕ್ಕೆ ನೀಡಬೇಕೆನ್ನುವುದು ಈಕೆಯ ಬಯಕೆಯಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಸಾಧ್ಯವಾಗಿರಲಿಲ್ಲ. ಇದೀಗ ಕಾಲ ಕೂಡಿ ಬಂದಿದ್ದು, ಭಾನಿವಾರ ಉಲನಾಡು ಗ್ರಾಮದ ಶ್ರೀಕೃಷ್ಣದೇವಸ್ಥಾನಕ್ಕೆ ತನ್ನ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ : ಮಾದಕ ವಸ್ತು ಮಾರಾಟ : ಬಾಲಿವುಡ್ ಸೇರಿ ಹಲವಾರು ಚಿತ್ರದಲ್ಲಿ ನಟಿಸಿದ್ದ ನೈಜೀರಿಯನ್ ನಟನ ಬಂಧನ -Vishwanews24  

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಜಸ್ನಾ, ಶ್ರೀ ಕೃಷ್ಣನ ಮೂರ್ತಿಯನ್ನು ಕಣ್ತುಂಬಿಕೊಳ್ಳುವುದು ಮತ್ತು ಆ ದೇವರ ಮುಂದೆ ನನ್ನ ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿವುದು ನನ್ನ ದೊಡ್ಡ ಕನಸಾಗಿತ್ತು. ಪಂಡಲಂನ ಉಲನಾಡು ಶ್ರೀಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನನ್ನ ಕನಸು ನನಸಾಗಿದ್ದಕ್ಕೆ ತುಂಬಾ ಸಂತೋಷವಾಯಿತ್ತು. ಈ ಸಂಭ್ರಮವನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದೇವಸ್ಥಾನದ ಅಧಿಕಾರಿಗಳಿಗೆ ನನ್ನ ಕೃತಜ್ಞತೆಗಳು ಎಂದು ಜಸ್ನಾ ಹೇಳಿದ್ದಾರೆ,.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

12 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

12 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

13 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

13 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

13 hours ago