ತಿರುವನಂತಪುರಂ: ದೇವರನಾಡು ಕೇರಳದ ಮುಸ್ಲಿಂ ಯುವತಿ ಜಸ್ನಾ ಸಲೀಂ ಅವರ ಬಹುದಿನಗಳ ಕನಸು ಈಡೇರಿದೆ.
ಕಳೆದ ಕೆಲ ವರ್ಷಗಳ ಹಿಂದೆ ಯುವತಿ ಜಸ್ನಾ ಅವರ ಹೆಸರು ಎಲ್ಲೆಡೆ ಕೇಳಿ ಬಂದಿತ್ತು. ಅದಕ್ಕೆ ಕಾರಣ ಅವರು ಬಿಡಿಸಿದ ವರ್ಣರಂಜಿತವಾದ ಚಿತ್ರಗಳಾಗಿವೆ. ದೇವರ ಭಾವಚಿತ್ರಗಳ ಪೆಂಟಿಂಗ್ ಈಕೆಗೆ ಅಚ್ಚುಮೆಚ್ಚು. ಕಳೆದ 6 ವರ್ಷಗಳಲ್ಲಿ ಸುಮಾರು 500ಕ್ಕೂ ಹೆಚ್ಚು ವಿವಿಧ ದೇವರ ಕಲಾಕೃತಿಗಳನ್ನು ಕುಂಚದಲ್ಲಿ ಅರಳಿಸಿದ್ದಾರೆ.
ತರಬೇತಿ ಪಡೆಯದೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುವ ಜಸ್ನಾ ಅವರಿಗೆ ಬಹುದಿನಗಳ ಆಸೆಯೊಂದಿತ್ತು. ಅದು ಇದೀಗ ಈಡೇರಿದೆ. ಇದುವರೆಗೆ ಅವರು ರಚಿಸಿದ ಚಿತ್ರಗಳನ್ನು ಹಿಂದೂ ದೇವರುಗಳ ಭಾವಚಿತ್ರಗಳೇ ಹೆಚ್ಚು. ತಾವು ಮಾಡಿದ ಕೃಷ್ಣನ ಪೆಂಟಿಂಗ್ನ್ನು ದೇವಸ್ಥಾನಕ್ಕೆ ನೀಡಬೇಕೆನ್ನುವುದು ಈಕೆಯ ಬಯಕೆಯಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಸಾಧ್ಯವಾಗಿರಲಿಲ್ಲ. ಇದೀಗ ಕಾಲ ಕೂಡಿ ಬಂದಿದ್ದು, ಭಾನಿವಾರ ಉಲನಾಡು ಗ್ರಾಮದ ಶ್ರೀಕೃಷ್ಣದೇವಸ್ಥಾನಕ್ಕೆ ತನ್ನ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ : ಮಾದಕ ವಸ್ತು ಮಾರಾಟ : ಬಾಲಿವುಡ್ ಸೇರಿ ಹಲವಾರು ಚಿತ್ರದಲ್ಲಿ ನಟಿಸಿದ್ದ ನೈಜೀರಿಯನ್ ನಟನ ಬಂಧನ -Vishwanews24
ಈ ಬಗ್ಗೆ ಸಂತಸ ಹಂಚಿಕೊಂಡಿರುವ ಜಸ್ನಾ, ಶ್ರೀ ಕೃಷ್ಣನ ಮೂರ್ತಿಯನ್ನು ಕಣ್ತುಂಬಿಕೊಳ್ಳುವುದು ಮತ್ತು ಆ ದೇವರ ಮುಂದೆ ನನ್ನ ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿವುದು ನನ್ನ ದೊಡ್ಡ ಕನಸಾಗಿತ್ತು. ಪಂಡಲಂನ ಉಲನಾಡು ಶ್ರೀಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನನ್ನ ಕನಸು ನನಸಾಗಿದ್ದಕ್ಕೆ ತುಂಬಾ ಸಂತೋಷವಾಯಿತ್ತು. ಈ ಸಂಭ್ರಮವನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದೇವಸ್ಥಾನದ ಅಧಿಕಾರಿಗಳಿಗೆ ನನ್ನ ಕೃತಜ್ಞತೆಗಳು ಎಂದು ಜಸ್ನಾ ಹೇಳಿದ್ದಾರೆ,.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…