Featured

ಬಹುಮತದಿಂದ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ .. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್‌ಡಿಎಗೆ ಅಧಿಕಾರ -Vishwanews24

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಇದು ಹೆಚ್ಚು ಕಡಿಮೆ 14 ವಾಹಿನಿಗಳು ನಡೆಸಿದ ಮತಗಟ್ಟೆ ಸಮೀಕ್ಷೆಯ ಫ‌ಲಿತಾಂಶದ ಸಾರಾಂಶ. ಬಹುತೇಕ ಎಲ್ಲ ಸಮೀಕ್ಷೆಗಳ ಪ್ರಕಾರ, ಕೇಂದ್ರದಲ್ಲಿ ಮತ್ತೆ ಮೋದಿ ಅವರ ಸರಕಾರವೇ ಸ್ಥಾಪಿತಗೊಳ್ಳಲಿದೆ. ಕಳೆದ ಬಾರಿಯಂತೆಯೇ ಸುಮಾರು 300 ಸೀಟುಗಳನ್ನು ಎನ್‌ಡಿಎ ಗೆಲ್ಲಲಿದೆ. ಕರ್ನಾಟಕದಲ್ಲೂ ಬಿಜೆಪಿ ತನ್ನ ಕರಾಮತ್ತು ತೋರಿಸಲಿದ್ದು, ಹೆಚ್ಚು ಕಡಿಮೆ 20 ಸೀಟುಗಳಲ್ಲಿ ಜಯ ಸಾಧಿಸಲಿದೆ ಎಂದು ಈ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಟೈಮ್ಸ್ ನೌ – ವಿಎಂಆರ್ ಸಮೀಕ್ಷೆ  ಪ್ರಕಾರ  542 ಸೀಟುಗಳಲ್ಲಿ ಎನ್‌ಡಿಎ  300 ಸೀಟು ಗಳಿಸಲಿದೆ. ರಿಪಬ್ಲಿಕ್ ಟಿವಿ – ಸಿವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ ನೇತತ್ವದ ಪಕ್ಷಗಳು  287  ಸೀಟುಗಳನ್ನು ಗೆಲ್ಲಲಿವೆ. ಅದೇ ವೇಳೆ ರಿಪಬ್ಲಿಕ್  -ಜನ್ ಕೀ ಬಾತ್ ಸಮೀಕ್ಷೆ ಪ್ರಕಾರ ಎನ್‌ಡಿಎ 305 ಸೀಟು ಮತ್ತು ನ್ಯೂಸ್ ನೇಷನ್ ಸಮೀಕ್ಷೆ ಪ್ರಕಾರ ಎನ್‌ಡಿಎ 282- 290 ಸೀಟುಗಳನ್ನು ಗಳಿಸಲಿದೆ.

ಕೇಂದ್ರದಲ್ಲಿ ಸರ್ಕಾರ ರಚಿಸಲು ಯಾವುದೇ ಪಕ್ಷ  ಅಥವಾ  ಮೈತ್ರಿಕೂಟಕ್ಕೆ 272 ಸೀಟುಗಳು ಬೇಕು.

2014ರಲ್ಲಿ  ಎನ್‌ಡಿಎ 336 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಿತ್ತು. ಮೋದಿ ನೇತೃತ್ವದ ಬಿಜೆಪಿ 282 ಸೀಟುಗಳನ್ನು ಗಳಿಸಿತ್ತು. ಏತನ್ಮಧ್ಯೆ, ಮೂರು ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ನೇತೃತ್ವದ ಯುಪಿಎಗೆ  124- 128 ಸೀಟುಗಳು ಲಭಿಸಲಿವೆ ಎಂದಿದೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

15 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

15 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

16 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

16 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

19 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

19 hours ago