Featured

ಬಹುಮತದಿಂದ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ .. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್‌ಡಿಎಗೆ ಅಧಿಕಾರ -Vishwanews24

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಇದು ಹೆಚ್ಚು ಕಡಿಮೆ 14 ವಾಹಿನಿಗಳು ನಡೆಸಿದ ಮತಗಟ್ಟೆ ಸಮೀಕ್ಷೆಯ ಫ‌ಲಿತಾಂಶದ ಸಾರಾಂಶ. ಬಹುತೇಕ ಎಲ್ಲ ಸಮೀಕ್ಷೆಗಳ ಪ್ರಕಾರ, ಕೇಂದ್ರದಲ್ಲಿ ಮತ್ತೆ ಮೋದಿ ಅವರ ಸರಕಾರವೇ ಸ್ಥಾಪಿತಗೊಳ್ಳಲಿದೆ. ಕಳೆದ ಬಾರಿಯಂತೆಯೇ ಸುಮಾರು 300 ಸೀಟುಗಳನ್ನು ಎನ್‌ಡಿಎ ಗೆಲ್ಲಲಿದೆ. ಕರ್ನಾಟಕದಲ್ಲೂ ಬಿಜೆಪಿ ತನ್ನ ಕರಾಮತ್ತು ತೋರಿಸಲಿದ್ದು, ಹೆಚ್ಚು ಕಡಿಮೆ 20 ಸೀಟುಗಳಲ್ಲಿ ಜಯ ಸಾಧಿಸಲಿದೆ ಎಂದು ಈ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಟೈಮ್ಸ್ ನೌ – ವಿಎಂಆರ್ ಸಮೀಕ್ಷೆ  ಪ್ರಕಾರ  542 ಸೀಟುಗಳಲ್ಲಿ ಎನ್‌ಡಿಎ  300 ಸೀಟು ಗಳಿಸಲಿದೆ. ರಿಪಬ್ಲಿಕ್ ಟಿವಿ – ಸಿವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ ನೇತತ್ವದ ಪಕ್ಷಗಳು  287  ಸೀಟುಗಳನ್ನು ಗೆಲ್ಲಲಿವೆ. ಅದೇ ವೇಳೆ ರಿಪಬ್ಲಿಕ್  -ಜನ್ ಕೀ ಬಾತ್ ಸಮೀಕ್ಷೆ ಪ್ರಕಾರ ಎನ್‌ಡಿಎ 305 ಸೀಟು ಮತ್ತು ನ್ಯೂಸ್ ನೇಷನ್ ಸಮೀಕ್ಷೆ ಪ್ರಕಾರ ಎನ್‌ಡಿಎ 282- 290 ಸೀಟುಗಳನ್ನು ಗಳಿಸಲಿದೆ.

ಕೇಂದ್ರದಲ್ಲಿ ಸರ್ಕಾರ ರಚಿಸಲು ಯಾವುದೇ ಪಕ್ಷ  ಅಥವಾ  ಮೈತ್ರಿಕೂಟಕ್ಕೆ 272 ಸೀಟುಗಳು ಬೇಕು.

2014ರಲ್ಲಿ  ಎನ್‌ಡಿಎ 336 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಿತ್ತು. ಮೋದಿ ನೇತೃತ್ವದ ಬಿಜೆಪಿ 282 ಸೀಟುಗಳನ್ನು ಗಳಿಸಿತ್ತು. ಏತನ್ಮಧ್ಯೆ, ಮೂರು ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ನೇತೃತ್ವದ ಯುಪಿಎಗೆ  124- 128 ಸೀಟುಗಳು ಲಭಿಸಲಿವೆ ಎಂದಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago