ಪುದುಚೇರಿ: ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಸಿಎಂ ವಿ.ನಾರಾಯಣಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆ.
ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ಸರ್ಕಾರ ವಿಫಲವಾಯ್ತು. ಕಾಂಗ್ರೆಸ್ನ 9 ಶಾಸಕರು, ಡಿಎಂಕೆಯ ಮೂವರು ಮತ್ತು ಪಕ್ಷೇತರ ಓರ್ವ ಶಾಸಕ ಸೇರಿದಂತೆ ಸರ್ಕಾರದ ಪರವಾಗಿದ್ದರು. ರಾತ್ರಿ ಡಿಎಂಕೆಯ ಓರ್ವ ಶಾಸಕ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ಗೆ ಕೇವಲ 12 ಶಾಸಕರ ಬೆಂಬಲ ಸಿಕ್ಕಿತ್ತು. ಆದ್ರೆ ಬಹುಮತಕ್ಕೆ 14 ಮತಗಳು ಬೇಕಿತ್ತು.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 200 ಅಂಕ ಕುಸಿತ -Vishwanews24
33 ಸದಸ್ಯರ ಪುದುಚೇರಿಯ ವಿಧಾನಸಭೆಯಲ್ಲಿ ಮೂವರು ಕೇಂದ್ರ ಸರ್ಕಾರದಿಂದ ನೇಮಕ ಆಗಿರುತ್ತಾರೆ. ಇನ್ನುಳಿದ 30 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿರುತ್ತಾರೆ. 2016ರ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಓರ್ವ ಶಾಸಕರನ್ನ ಕಾಂಗ್ರೆಸ್ ಉಚ್ಛಾಟಿತಗೊಳಿಸಿದ್ರೆ, ಐವರು ಶಾಸಕರು ರಾಜೀನಾಮೆ ನೀಡಿದ್ದಾರೆ.
ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ : ತಲಪಾಡಿಯಲ್ಲಿ ಕೊರೊನಾ ಚೆಕ್ ಪೋಸ್ಟ್ ಪುನರಾರಂಭ -Vishwanews24
ಡಿಎಂಕೆಯ ಮೂವರು ಶಾಸಕರು ಕಾಂಗ್ರೆಸ್ಗೆ ಬೆಂಬಲ ನೀಡಿದ್ದರು. ಆದ್ರೆ ಭಾನುವಾರದ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಡಿಎಂಕೆ ಓರ್ವ ಶಾಸಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕೈ ನಾಯಕರಿಗೆ ಶಾಕ್ ನೀಡಿದರು. ಭಾನುವಾರದ ವೇಳೆ ಕಾಂಗ್ರೆಸ್ ಬಳಿ ಕೇವಲ 12 ಶಾಸಕರ ಸಮರ್ಥನೆ ಇತ್ತು. ಆರು ಶಾಸಕರ ರಾಜೀನಾಮೆ ಮತ್ತು ಒಬ್ಬರ ಅನರ್ಹತೆ ಹಿನ್ನೆಲೆ ಪುದುಚೇರಿಯ ವಿಧಾನಸಭಾ ಸದಸ್ಯರ ಸಂಖ್ಯೆ 26ಕ್ಕೆ ತಲುಪಿತ್ತು.
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…