ಪುದುಚೇರಿ: ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಸಿಎಂ ವಿ.ನಾರಾಯಣಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆ.
ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ಸರ್ಕಾರ ವಿಫಲವಾಯ್ತು. ಕಾಂಗ್ರೆಸ್ನ 9 ಶಾಸಕರು, ಡಿಎಂಕೆಯ ಮೂವರು ಮತ್ತು ಪಕ್ಷೇತರ ಓರ್ವ ಶಾಸಕ ಸೇರಿದಂತೆ ಸರ್ಕಾರದ ಪರವಾಗಿದ್ದರು. ರಾತ್ರಿ ಡಿಎಂಕೆಯ ಓರ್ವ ಶಾಸಕ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ಗೆ ಕೇವಲ 12 ಶಾಸಕರ ಬೆಂಬಲ ಸಿಕ್ಕಿತ್ತು. ಆದ್ರೆ ಬಹುಮತಕ್ಕೆ 14 ಮತಗಳು ಬೇಕಿತ್ತು.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 200 ಅಂಕ ಕುಸಿತ -Vishwanews24
33 ಸದಸ್ಯರ ಪುದುಚೇರಿಯ ವಿಧಾನಸಭೆಯಲ್ಲಿ ಮೂವರು ಕೇಂದ್ರ ಸರ್ಕಾರದಿಂದ ನೇಮಕ ಆಗಿರುತ್ತಾರೆ. ಇನ್ನುಳಿದ 30 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿರುತ್ತಾರೆ. 2016ರ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಓರ್ವ ಶಾಸಕರನ್ನ ಕಾಂಗ್ರೆಸ್ ಉಚ್ಛಾಟಿತಗೊಳಿಸಿದ್ರೆ, ಐವರು ಶಾಸಕರು ರಾಜೀನಾಮೆ ನೀಡಿದ್ದಾರೆ.
ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ : ತಲಪಾಡಿಯಲ್ಲಿ ಕೊರೊನಾ ಚೆಕ್ ಪೋಸ್ಟ್ ಪುನರಾರಂಭ -Vishwanews24
ಡಿಎಂಕೆಯ ಮೂವರು ಶಾಸಕರು ಕಾಂಗ್ರೆಸ್ಗೆ ಬೆಂಬಲ ನೀಡಿದ್ದರು. ಆದ್ರೆ ಭಾನುವಾರದ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಡಿಎಂಕೆ ಓರ್ವ ಶಾಸಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕೈ ನಾಯಕರಿಗೆ ಶಾಕ್ ನೀಡಿದರು. ಭಾನುವಾರದ ವೇಳೆ ಕಾಂಗ್ರೆಸ್ ಬಳಿ ಕೇವಲ 12 ಶಾಸಕರ ಸಮರ್ಥನೆ ಇತ್ತು. ಆರು ಶಾಸಕರ ರಾಜೀನಾಮೆ ಮತ್ತು ಒಬ್ಬರ ಅನರ್ಹತೆ ಹಿನ್ನೆಲೆ ಪುದುಚೇರಿಯ ವಿಧಾನಸಭಾ ಸದಸ್ಯರ ಸಂಖ್ಯೆ 26ಕ್ಕೆ ತಲುಪಿತ್ತು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…