ರಾಜ್ಯ ನ್ಯೂಸ್

ಬಹುಮತ ಸಾಬೀತು ಮಾಡುವ ಮೊದಲೇ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ: ಡಿವಿಎಸ್​

ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ. ಬಹುಮತ ಸಾಬೀತು ಮಾಡುವ ಸಂದರ್ಭದಲ್ಲೇ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಕಾಂಗ್ರೆಸ್ ಇರಬಾರದೆಂದು ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್​ನವರು ಬಿಜೆಪಿಗೆ ನೀಡಿದ್ದ ಜನಾದೇಶವನ್ನು ಧಿಕ್ಕರಿಸಿದ್ದಾರೆ. ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತೇವೆ ಎಂದರು.

ಬಿಡುಗಡೆಗೊಂಡ ಆಡಿಯೋಗಳು ಫೇಕ್​ 
ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಸುಳ್ಳು. ಆಡಿಯೋ, ವೀಡಿಯೋಗಳ ಬಗ್ಗೆ ತನಿಖೆ ನಡೆಯಲಿ. ಎಲ್ಲವೂ ಫೇಕ್​. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು ಎಂದರು.

ಕೈ-ತೆನೆ ಕೊಳಕು ರಾಜಕೀಯ 
ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದು, ಎಚ್ಡಿಕೆ ಹಾವು ಮುಂಗಿಸಿಯಂತಿದ್ದವರು. ಅಧಿಕಾರಕ್ಕಾಗಿ ಈಗ ಒಂದಾಗಿದ್ದಾರೆ. ಕಾಂಗ್ರೆಸ್ ಜತೆ ಜೆಡಿಎಸ್ ಹೋಗಲ್ಲ ಎಂದುಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡಲಿಲ್ಲ ಎಂದರು.

Vishwa News 24

Recent Posts

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

10 minutes ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

21 minutes ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

29 minutes ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

39 minutes ago

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…

44 minutes ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

2 hours ago