ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ. ಬಹುಮತ ಸಾಬೀತು ಮಾಡುವ ಸಂದರ್ಭದಲ್ಲೇ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಕಾಂಗ್ರೆಸ್ ಇರಬಾರದೆಂದು ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್ನವರು ಬಿಜೆಪಿಗೆ ನೀಡಿದ್ದ ಜನಾದೇಶವನ್ನು ಧಿಕ್ಕರಿಸಿದ್ದಾರೆ. ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತೇವೆ ಎಂದರು.
ಬಿಡುಗಡೆಗೊಂಡ ಆಡಿಯೋಗಳು ಫೇಕ್
ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಸುಳ್ಳು. ಆಡಿಯೋ, ವೀಡಿಯೋಗಳ ಬಗ್ಗೆ ತನಿಖೆ ನಡೆಯಲಿ. ಎಲ್ಲವೂ ಫೇಕ್. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು ಎಂದರು.
ಕೈ-ತೆನೆ ಕೊಳಕು ರಾಜಕೀಯ
ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದು, ಎಚ್ಡಿಕೆ ಹಾವು ಮುಂಗಿಸಿಯಂತಿದ್ದವರು. ಅಧಿಕಾರಕ್ಕಾಗಿ ಈಗ ಒಂದಾಗಿದ್ದಾರೆ. ಕಾಂಗ್ರೆಸ್ ಜತೆ ಜೆಡಿಎಸ್ ಹೋಗಲ್ಲ ಎಂದುಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡಲಿಲ್ಲ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…