ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ. ಬಹುಮತ ಸಾಬೀತು ಮಾಡುವ ಸಂದರ್ಭದಲ್ಲೇ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಕಾಂಗ್ರೆಸ್ ಇರಬಾರದೆಂದು ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್ನವರು ಬಿಜೆಪಿಗೆ ನೀಡಿದ್ದ ಜನಾದೇಶವನ್ನು ಧಿಕ್ಕರಿಸಿದ್ದಾರೆ. ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತೇವೆ ಎಂದರು.
ಬಿಡುಗಡೆಗೊಂಡ ಆಡಿಯೋಗಳು ಫೇಕ್
ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಸುಳ್ಳು. ಆಡಿಯೋ, ವೀಡಿಯೋಗಳ ಬಗ್ಗೆ ತನಿಖೆ ನಡೆಯಲಿ. ಎಲ್ಲವೂ ಫೇಕ್. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು ಎಂದರು.
ಕೈ-ತೆನೆ ಕೊಳಕು ರಾಜಕೀಯ
ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದು, ಎಚ್ಡಿಕೆ ಹಾವು ಮುಂಗಿಸಿಯಂತಿದ್ದವರು. ಅಧಿಕಾರಕ್ಕಾಗಿ ಈಗ ಒಂದಾಗಿದ್ದಾರೆ. ಕಾಂಗ್ರೆಸ್ ಜತೆ ಜೆಡಿಎಸ್ ಹೋಗಲ್ಲ ಎಂದುಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡಲಿಲ್ಲ ಎಂದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…