ಮಂಗಳೂರು : ಬಹುಮಾನ ಬಂದಿದೆ ಎಂಬ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 7,85,800 ರೂಪಾಯಿ ವಂಚಿಸಿದ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವ್ಯಕ್ತಿಗೆ ಡಿಸೆಂಬರ್ನಲ್ಲಿ ನಾಪ್ಟಾಲ್ ಸಂಸ್ಥೆಯಿಂದ ರಿಜಿಸ್ಟರ್ ಪೋಸ್ಟ್ ಬಂದಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ ನ್ಯಾಪ್ಟಾಲ್ ಸಂಸ್ಥೆಯ ಹೆಸರಿನಲ್ಲಿ ಒಂದು ಸ್ಕ್ರಾಚ್ ಕಾರ್ಡ್ ಹಾಗೂ ಪತ್ರ ಇತ್ತು. ಅದನ್ನು ನೋಡಿದಾಗ 12 ಲಕ್ಷ ರೂ. ಬಹುಮಾನ ಬಂದಿರುವುದಾಗಿ ನಮೂದಿಸಲಾಗಿತ್ತು. ಆ ಬಳಿಕ ಅದರಲ್ಲಿ ಇದ್ದ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿದಾಗ ಅಂಚೆಯಲ್ಲಿ ಬಂದ ಪತ್ರದಲ್ಲಿ ಬ್ಯಾಂಕ್ ಖಾತೆ ವಿವರ ಹಾಗೂ ವಿಳಾಸವನ್ನು ನಮೂದಿಸಿ ವಾಟ್ಸ್ ಅಪ್ ಮೂಲಕ ಕಳುಹಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದಂತೆ ಮಂಗಳೂರಿನ ವ್ಯಕ್ತಿ 9432582448 ನಂಬರ್ಗೆ ಸಂಪರ್ಕಿಸಿ, ವಿವರಗಳನ್ನು ಕಳುಹಿಸಿದ್ದರು. ಆ ಬಳಿಕ ಬೇರೊಂದು ನಂಬರ್ನಿಂದ ಕರೆ ಬಂದಿದ್ದು, ತನ್ನ ಹೆಸರು ಪ್ರದೀಪ್ ಪೂಜಾರಿ, ನಿಮ್ಮ ಬಹುಮಾನ ಪಡೆದುಕೊಳ್ಳಲು ಕೆಲವು ಶುಲ್ಕಗಳಿದ್ದು, ಬಹುಮಾನದ ಹಣ ಪಡೆಯಲು 46 ಸಾವಿರ ಮತ್ತು ಇತರ ಶುಲ್ಕ ಪಾವತಿಸಲು ಸೂಚಿಸಿದ್ದಾನೆ. ಅದನ್ನು ಮೊದಲು ಪಾವತಿಸುವಂತೆ ತಿಳಿಸಿದ್ದನು. 2020 ಡಿಸೆಂಬರ್ 12 ರಿಂದ 2021 ಮಾರ್ಚ್ 12 ದಿನಾಂಕದ ವರೆಗೆ ಮಂಗಳೂರಿನ ವ್ಯಕ್ತಿಯಿಂದ ಬಹುಮಾನ ನೀಡುತ್ತೇವೆ ಎಂದು 7,85,800 ರೂ. ವರ್ಗಾಯಿಸಿಕೊಂಡಿದ್ದಾರೆ. ಆರೋಪಿಗಳು ಬಹುಮಾನ ನೀಡದೇ ವಂಚನೆ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಬಳಿಕ ಈ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬ್ಯುರೋ ವರದಿ: ಮಂಗಳೂರು
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…