Featured

ಬಹ್ರೇನ್‌ನಲ್ಲಿ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿಯಿಂದ ಶಂಕುಸ್ಥಾಪನೆ -Vishwanews24

ಮನಮಾ : ಇಲ್ಲಿನ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಡಾಲರ್ 4.2 ಮಿಲಿಯನ್ ವೆಚ್ಚದಲ್ಲಿ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಬಹ್ರೈನ್ ಗೆ ಮೊದಲ ಬಾರಿಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದು ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ, ಬಹ್ರೈನ್ ನ ಶ್ರೀನಾಥಜೀ ದೇವಸ್ಥಾನದಲ್ಲಿ ಉತ್ತಮ ಸಮಯ ಕಳೆದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಇದು ಭಾರತ ಮತ್ತು ಬಹ್ರೈನ್ ಮಧ್ಯೆ ಗಟ್ಟಿಯಾದ ಸಂಬಂಧ ಬೆಳೆಸುತ್ತದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ಬಂದ ಭಾರತೀಯರನ್ನು ಮೋದಿಯವರು ಮಾತನಾಡಿಸಿದರು.

4.2 ಮಿಲಿಯನ್ ವೆಚ್ಚದಲ್ಲಿ ದೇವಸ್ಥಾನದ ಮರು ಅಭಿವೃದ್ಧಿ ಯೋಜನೆಗಳನ್ನು 16 ಸಾವಿರದ 500 ಚದರಡಿ ವಿಸ್ತೀರ್ಣದಲ್ಲಿ ಹೊಸ ನಾಲ್ಕು ಮಹಡಿಯ ಕಟ್ಟಡ 45 ಸಾವಿರ ಚದರಡಿ 30 ಮೀಟರ್ ಎತ್ತರ ಹೊಂದಿರುತ್ತದೆ. ಮರು ಅಭಿವೃದ್ಧಿ ಮಾಡುವಾಗ 200 ವರ್ಷ ಹಳೆಯ ದೇವಸ್ಥಾನದ ಪರಂಪರೆಯನ್ನು ತೋರಿಸಲಾಗುತ್ತದೆ. ಹೊಸ ಸಾಂಪ್ರದಾಯಿಕ ಸಂಕೀರ್ಣವು ಗರ್ಭಗುಡಿ ಮತ್ತು ಪ್ರಾರ್ಥನಾ ಮಂದಿರಗಳನ್ನು ಹೊಂದಿರುತ್ತದೆ.

ಬಹ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago