Featured

ಬಹ್ರೇನ್‌ನಲ್ಲಿ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿಯಿಂದ ಶಂಕುಸ್ಥಾಪನೆ -Vishwanews24

ಮನಮಾ : ಇಲ್ಲಿನ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಡಾಲರ್ 4.2 ಮಿಲಿಯನ್ ವೆಚ್ಚದಲ್ಲಿ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಬಹ್ರೈನ್ ಗೆ ಮೊದಲ ಬಾರಿಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದು ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ, ಬಹ್ರೈನ್ ನ ಶ್ರೀನಾಥಜೀ ದೇವಸ್ಥಾನದಲ್ಲಿ ಉತ್ತಮ ಸಮಯ ಕಳೆದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಇದು ಭಾರತ ಮತ್ತು ಬಹ್ರೈನ್ ಮಧ್ಯೆ ಗಟ್ಟಿಯಾದ ಸಂಬಂಧ ಬೆಳೆಸುತ್ತದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ಬಂದ ಭಾರತೀಯರನ್ನು ಮೋದಿಯವರು ಮಾತನಾಡಿಸಿದರು.

4.2 ಮಿಲಿಯನ್ ವೆಚ್ಚದಲ್ಲಿ ದೇವಸ್ಥಾನದ ಮರು ಅಭಿವೃದ್ಧಿ ಯೋಜನೆಗಳನ್ನು 16 ಸಾವಿರದ 500 ಚದರಡಿ ವಿಸ್ತೀರ್ಣದಲ್ಲಿ ಹೊಸ ನಾಲ್ಕು ಮಹಡಿಯ ಕಟ್ಟಡ 45 ಸಾವಿರ ಚದರಡಿ 30 ಮೀಟರ್ ಎತ್ತರ ಹೊಂದಿರುತ್ತದೆ. ಮರು ಅಭಿವೃದ್ಧಿ ಮಾಡುವಾಗ 200 ವರ್ಷ ಹಳೆಯ ದೇವಸ್ಥಾನದ ಪರಂಪರೆಯನ್ನು ತೋರಿಸಲಾಗುತ್ತದೆ. ಹೊಸ ಸಾಂಪ್ರದಾಯಿಕ ಸಂಕೀರ್ಣವು ಗರ್ಭಗುಡಿ ಮತ್ತು ಪ್ರಾರ್ಥನಾ ಮಂದಿರಗಳನ್ನು ಹೊಂದಿರುತ್ತದೆ.

ಬಹ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago