ಮನಮಾ : ಇಲ್ಲಿನ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಡಾಲರ್ 4.2 ಮಿಲಿಯನ್ ವೆಚ್ಚದಲ್ಲಿ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
ಬಹ್ರೈನ್ ಗೆ ಮೊದಲ ಬಾರಿಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದು ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ, ಬಹ್ರೈನ್ ನ ಶ್ರೀನಾಥಜೀ ದೇವಸ್ಥಾನದಲ್ಲಿ ಉತ್ತಮ ಸಮಯ ಕಳೆದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಇದು ಭಾರತ ಮತ್ತು ಬಹ್ರೈನ್ ಮಧ್ಯೆ ಗಟ್ಟಿಯಾದ ಸಂಬಂಧ ಬೆಳೆಸುತ್ತದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ಬಂದ ಭಾರತೀಯರನ್ನು ಮೋದಿಯವರು ಮಾತನಾಡಿಸಿದರು.
4.2 ಮಿಲಿಯನ್ ವೆಚ್ಚದಲ್ಲಿ ದೇವಸ್ಥಾನದ ಮರು ಅಭಿವೃದ್ಧಿ ಯೋಜನೆಗಳನ್ನು 16 ಸಾವಿರದ 500 ಚದರಡಿ ವಿಸ್ತೀರ್ಣದಲ್ಲಿ ಹೊಸ ನಾಲ್ಕು ಮಹಡಿಯ ಕಟ್ಟಡ 45 ಸಾವಿರ ಚದರಡಿ 30 ಮೀಟರ್ ಎತ್ತರ ಹೊಂದಿರುತ್ತದೆ. ಮರು ಅಭಿವೃದ್ಧಿ ಮಾಡುವಾಗ 200 ವರ್ಷ ಹಳೆಯ ದೇವಸ್ಥಾನದ ಪರಂಪರೆಯನ್ನು ತೋರಿಸಲಾಗುತ್ತದೆ. ಹೊಸ ಸಾಂಪ್ರದಾಯಿಕ ಸಂಕೀರ್ಣವು ಗರ್ಭಗುಡಿ ಮತ್ತು ಪ್ರಾರ್ಥನಾ ಮಂದಿರಗಳನ್ನು ಹೊಂದಿರುತ್ತದೆ.
ಬಹ್ರೇನ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು.
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…