Featured

ಬಹ್ರೇನ್‌ನಲ್ಲಿ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿಯಿಂದ ಶಂಕುಸ್ಥಾಪನೆ -Vishwanews24

ಮನಮಾ : ಇಲ್ಲಿನ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಡಾಲರ್ 4.2 ಮಿಲಿಯನ್ ವೆಚ್ಚದಲ್ಲಿ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಬಹ್ರೈನ್ ಗೆ ಮೊದಲ ಬಾರಿಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದು ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ, ಬಹ್ರೈನ್ ನ ಶ್ರೀನಾಥಜೀ ದೇವಸ್ಥಾನದಲ್ಲಿ ಉತ್ತಮ ಸಮಯ ಕಳೆದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಇದು ಭಾರತ ಮತ್ತು ಬಹ್ರೈನ್ ಮಧ್ಯೆ ಗಟ್ಟಿಯಾದ ಸಂಬಂಧ ಬೆಳೆಸುತ್ತದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ಬಂದ ಭಾರತೀಯರನ್ನು ಮೋದಿಯವರು ಮಾತನಾಡಿಸಿದರು.

4.2 ಮಿಲಿಯನ್ ವೆಚ್ಚದಲ್ಲಿ ದೇವಸ್ಥಾನದ ಮರು ಅಭಿವೃದ್ಧಿ ಯೋಜನೆಗಳನ್ನು 16 ಸಾವಿರದ 500 ಚದರಡಿ ವಿಸ್ತೀರ್ಣದಲ್ಲಿ ಹೊಸ ನಾಲ್ಕು ಮಹಡಿಯ ಕಟ್ಟಡ 45 ಸಾವಿರ ಚದರಡಿ 30 ಮೀಟರ್ ಎತ್ತರ ಹೊಂದಿರುತ್ತದೆ. ಮರು ಅಭಿವೃದ್ಧಿ ಮಾಡುವಾಗ 200 ವರ್ಷ ಹಳೆಯ ದೇವಸ್ಥಾನದ ಪರಂಪರೆಯನ್ನು ತೋರಿಸಲಾಗುತ್ತದೆ. ಹೊಸ ಸಾಂಪ್ರದಾಯಿಕ ಸಂಕೀರ್ಣವು ಗರ್ಭಗುಡಿ ಮತ್ತು ಪ್ರಾರ್ಥನಾ ಮಂದಿರಗಳನ್ನು ಹೊಂದಿರುತ್ತದೆ.

ಬಹ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago