ಢಾಕಾ: ಬಾಂಗ್ಲಾದೇಶದಲ್ಲಿ ಇಸ್ಕಾನ್ ಚಟುವಟಿಕೆಯನ್ನು ನಿಷೇಧಿಸುವ ಸ್ವಯಂ ಪ್ರೇರಿತ ಆದೇಶವನ್ನು ಜಾರಿಗೊಳಿಸಲು ಢಾಕಾ ಹೈಕೋರ್ಟ್ ಗುರುವಾರ (ನ.28) ನಿರಾಕರಿಸಿದ್ದು, ಇದು ಬಾಂಗ್ಲಾದೇಶ್ ಸರ್ಕಾರಕ್ಕೆ ತೀವ್ರ ಮುಖಭಂಗಕ್ಕೀಡು ಮಾಡಿದೆ.
ಇಸ್ಕಾನ್ ನಿಷೇಧಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಸರ್ಕಾರದ ಅಧಿಕಾರಿಗಳೇ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿರುವುದಾಗಿ ದ ಡೈಲಿ ಸ್ಟಾರ್ ವರದಿ ಮಾಡಿದೆ.
ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ವಕೀಲ ಮೊಹಮ್ಮದ್ ಮೋನಿರ್ ಉದ್ದೀನ್, ಇಸ್ಕಾನ್ ಗೆ ಸಂಬಂಧಿಸಿದ ಸುದ್ದಿ ಪ್ರಕಟಿಸಿದ್ದ ಹಲವಾರು ದಿನಪತ್ರಿಕೆಗಳ ವರದಿಯನ್ನು ಪೀಠಕ್ಕೆ ಸಲ್ಲಿಸಿದ್ದರು.
ಇಸ್ಕಾನ್ ಚಟುವಟಿಕೆಗೆ ಸಂಬಂಧಿಸಿದ ವರದಿಗಳು ಇದಾಗಿದ್ದು, ಇದನ್ನು ಪರಿಶೀಲಿಸಬೇಕು. ಅಲ್ಲದೇ ಹೈಕೋರ್ಟ್ ಇಸ್ಕಾನ್ ಸಂಘಟನೆಯನ್ನು ನಿಷೇಧಿಸಿ, ಚತ್ತೋಗ್ರಾಮ್, ರಂಗ್ ಪುರ್ ಹಾಗೂ ದಿನಾಜ್ ಪುರ್ ನಲ್ಲಿ ಸೆಕ್ಷನ್ 144 ಜಾರಿಗೊಳಿಸಲು ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು.
ಹೈಕೋರ್ಟ್ ಪೀಠದ ಜಸ್ಟೀಸ್ ಫರಾಹ್ ಮೆಹಬೂಬ್ ಮತ್ತು ಜಸ್ಟೀಸ್ ದೇಬಸೀಸ್ ರಾಯ್ ಚೌಧುರಿ, ಇತ್ತೀಚೆಗಿನ ಇಸ್ಕಾನ್ ಚಟುವಟಿಕೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಸಂಪೂರ್ಣ ವಿವರ ನೀಡುವಂತೆ ಸೂಚಿಸಿರುವುದಾಗಿ ವರದಿ ವಿವರಿಸಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದ ಹಿಂದೂ ಮುಖಂಡ, ಇಸ್ಕಾನ್ ನ ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ದೇಶದ್ರೋಹ ಆರೋಪದ ಮೇಲೆ ಬಾಂಗ್ಲಾ ಸರ್ಕಾರ ಬಂಧಿಸಿತ್ತು. ಬಳಿಕ ಇಸ್ಕಾನ್ ಸಂಘಟನೆ ನಿಷೇಧಿಸುವಂತೆ ಕೋರಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…