ಢಾಕಾ: ಬಾಂಗ್ಲಾದೇಶದಲ್ಲಿ ಇಸ್ಕಾನ್ ಚಟುವಟಿಕೆಯನ್ನು ನಿಷೇಧಿಸುವ ಸ್ವಯಂ ಪ್ರೇರಿತ ಆದೇಶವನ್ನು ಜಾರಿಗೊಳಿಸಲು ಢಾಕಾ ಹೈಕೋರ್ಟ್ ಗುರುವಾರ (ನ.28) ನಿರಾಕರಿಸಿದ್ದು, ಇದು ಬಾಂಗ್ಲಾದೇಶ್ ಸರ್ಕಾರಕ್ಕೆ ತೀವ್ರ ಮುಖಭಂಗಕ್ಕೀಡು ಮಾಡಿದೆ.
ಇಸ್ಕಾನ್ ನಿಷೇಧಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಸರ್ಕಾರದ ಅಧಿಕಾರಿಗಳೇ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿರುವುದಾಗಿ ದ ಡೈಲಿ ಸ್ಟಾರ್ ವರದಿ ಮಾಡಿದೆ.
ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ವಕೀಲ ಮೊಹಮ್ಮದ್ ಮೋನಿರ್ ಉದ್ದೀನ್, ಇಸ್ಕಾನ್ ಗೆ ಸಂಬಂಧಿಸಿದ ಸುದ್ದಿ ಪ್ರಕಟಿಸಿದ್ದ ಹಲವಾರು ದಿನಪತ್ರಿಕೆಗಳ ವರದಿಯನ್ನು ಪೀಠಕ್ಕೆ ಸಲ್ಲಿಸಿದ್ದರು.
ಇಸ್ಕಾನ್ ಚಟುವಟಿಕೆಗೆ ಸಂಬಂಧಿಸಿದ ವರದಿಗಳು ಇದಾಗಿದ್ದು, ಇದನ್ನು ಪರಿಶೀಲಿಸಬೇಕು. ಅಲ್ಲದೇ ಹೈಕೋರ್ಟ್ ಇಸ್ಕಾನ್ ಸಂಘಟನೆಯನ್ನು ನಿಷೇಧಿಸಿ, ಚತ್ತೋಗ್ರಾಮ್, ರಂಗ್ ಪುರ್ ಹಾಗೂ ದಿನಾಜ್ ಪುರ್ ನಲ್ಲಿ ಸೆಕ್ಷನ್ 144 ಜಾರಿಗೊಳಿಸಲು ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು.
ಹೈಕೋರ್ಟ್ ಪೀಠದ ಜಸ್ಟೀಸ್ ಫರಾಹ್ ಮೆಹಬೂಬ್ ಮತ್ತು ಜಸ್ಟೀಸ್ ದೇಬಸೀಸ್ ರಾಯ್ ಚೌಧುರಿ, ಇತ್ತೀಚೆಗಿನ ಇಸ್ಕಾನ್ ಚಟುವಟಿಕೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಸಂಪೂರ್ಣ ವಿವರ ನೀಡುವಂತೆ ಸೂಚಿಸಿರುವುದಾಗಿ ವರದಿ ವಿವರಿಸಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದ ಹಿಂದೂ ಮುಖಂಡ, ಇಸ್ಕಾನ್ ನ ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ದೇಶದ್ರೋಹ ಆರೋಪದ ಮೇಲೆ ಬಾಂಗ್ಲಾ ಸರ್ಕಾರ ಬಂಧಿಸಿತ್ತು. ಬಳಿಕ ಇಸ್ಕಾನ್ ಸಂಘಟನೆ ನಿಷೇಧಿಸುವಂತೆ ಕೋರಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…