Featured

ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ; ಮುಂದಿನವಾರ ಢಾಕಾಗೆ ಪ್ರಧಾನಿ ಮೋದಿ ಭೇಟಿ ,3 ಒಡಂಬಡಿಕೆಗೆ ಸಹಿ ಸಾಧ್ಯತೆ -Vishwanews24

ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ; ಮುಂದಿನವಾರ ಢಾಕಾಗೆ ಪ್ರಧಾನಿ ಮೋದಿ ಭೇಟಿ ,3 ಒಡಂಬಡಿಕೆಗೆ ಸಹಿ ಸಾಧ್ಯತೆ -Vishwanews24

ಢಾಕಾ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಹಾಗೂ ರಾಷ್ಟ್ರಪಿತ ಬಂಗಬಂಧು ಶೇಖ್‌ ಮುಜಿಬುರ್‌ ರಹಮಾನ್ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಂದಿನವಾರ ಢಾಕಾಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಬಾಂಗ್ಲಾದೊಂದಿಗೆ ಮೂರು ಒಡಂಬಡಿಕೆಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.

ಬಾಂಗ್ಲಾ ಭೇಟಿಯಲ್ಲಿ ಪ್ರಧಾನಿ ನರೇಂದ್ರಮೋದಿಯವರು ಢಾಕಾದ ಹೊರವಲಯದ ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಉಭಯ ರಾಷ್ಟ್ರಗಳ ನಾಯಕರು ಮೂರು ಒಡಂಬಡಿಕೆಗಳಿಗೆ (ಎಂಒಯು) ಸಹಿ ಹಾಕಲಿದ್ದಾರೆ. ಸದ್ಯ ಈ ಮೂರು ಎಂಒಯುಗಳು ಇನ್ನೂ ಅಂತಿಮಗೊಂಡಿಲ್ಲ‘ ಎಂದು ಮೊಮೆನ್ ಹೇಳಿದರು.

ಉಡುಪಿ : ಜಿಲ್ಲೆಯಲ್ಲಿ ಪಿನಾಯಿಲ್ ಮಾರಾಟದ ನೆಪದಲ್ಲಿ ಆಭರಣ ಕಳ್ಳತನ ಮಾಡುವ ಖತರ್ನಾಕ್ ಮಹಿಳಾ ಗ್ಯಾಂಗ್ -Vishwanews24

‘ವಿಪತ್ತು ನಿರ್ವಹಣೆ ಮತ್ತು ಎರಡು ರಾಷ್ಟ್ರಗಳಲ್ಲಿರುವ ಕೆಲವು ಸಂಸ್ಥೆಗಳೊಂದಿಗಿನ ಪರಸ್ಪರ ಸಹಕಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ‘ ಎಂದು ವಿದೇಶಾಂಗ ಕಾರ್ಯದರ್ಶಿ ಮೊಮೆನ್ ಹೇಳಿದ್ದಾರೆ. ‌

ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಭಾರತ ಸೇರಿದಂತೆ, ನೇಪಾಳ, ಶ್ರೀಲಂಕಾ, ಭೂತಾನ್ ಮತ್ತು ಮಾಲ್ಡೀವ್ಸ್‌ ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದಿನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್‌ ಗೋಯಲ್‌ -Vishwanews24

‘ಯಾವುದೇ ಶೃಂಗಸಭೆಗಳಿಲ್ಲದೆಯೂ, ಐದು ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದು ಬಾಂಗ್ಲಾದೇಶದ ಪಾಲಿಗೆ ಐತಿಹಾಸಿಕ ಕಾರ್ಯಕ್ರಮವಾಗಲಿದೆ‘ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕ್‌ ಅಬ್ದುಲ್ ಮೊಮೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ಕೋವಿಡ್‌ 19 ಸಾಂಕ್ರಾಮಿಕದ ನಡುವೆಯೂ ನೆರೆ ಹೊರೆಯ ರಾಷ್ಟ್ರಗಳ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರಪಿತರಿಗೆ ಗೌರವ ಸಲ್ಲಿಸುತ್ತಿದ್ದಾರೆ‘ ಎಂದು ಅವರು ಹೇಳಿದ್ದಾರೆ.

ಮಂಗಳೂರು : ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಪುನರಾ ರಂಭಿಸಲು ಹೈಕೋರ್ಟ್ ‌ಹಸುರು ನಿಶಾನೆ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

17 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

17 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

20 hours ago