ಬಾಂಗ್ಲಾದೇಶ : ಬಾಂಗ್ಲಾದೇಶದಲ್ಲಿ ಧಾರ್ಮಿಕ ಯಾತ್ರಾರ್ಥಿಗಳನ್ನು ತುಂಬಿದ್ದ ದೋಣಿ ಮುಳುಗಿದ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಿದೆ. ದೋಣಿಯಿಂದ ನಾಪತ್ತೆಯಾಗಿದ್ದವರ ಪತ್ತೆ ಕಾರ್ಯಾಚರಣೆ ಮುಂದುವರೆದಿದ್ದು, ಇಂದು 10 ಮೃತದೇಹಗಳನ್ನು ರಕ್ಷಕರು ಮತ್ತು ನೌಕಾಪಡೆಯ ಡೈವರ್ಗಳು ಹೊರತೆಗೆದಿದ್ದು, ಈ ಮೂಲಕ ಮೃತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರಲ್ಲಿ ಹದಿನೇಳು ಮಕ್ಕಳು ಹಾಗೂ ಕನಿಷ್ಠ 30 ಮಹಿಳೆಯರಿದ್ದಾರೆ. ಘಟನೆಯ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಬ್ದುರ್ ರಜಾಕ್ ಅತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ, ನೌಕಾಪಡೆಯ ಡೈವರ್ಗಳು ಮತ್ತು ಗ್ರಾಮಸ್ಥರು ಸೇರಿದಂತೆ ರಕ್ಷಣಾ ಕಾರ್ಯಕರ್ತರು ದುರಂತ ಸಂಭವಿಸಿದ ಕರೋಟೋವಾ ನದಿಯಲ್ಲಿ ಮೈಲುಗಳಷ್ಟು ಕೆಳಗೆ ಹುಡುಕುತ್ತಿದ್ದಾರೆ ಎಂದು ಬೋಡಾ ಪೊಲೀಸ್ ಮುಖ್ಯಸ್ಥ ಸುಜಯ್ ಕುಮಾರ್ ರಾಯ್ ಹೇಳಿದ್ದಾರೆ.
ಪೋಕ್ಸೋ ಪ್ರಕರಣ : ಅ.10 ರವರೆಗೆ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆ : ಕೋರ್ಟ್ ಆದೇಶ – Vishwanews24
ಉತ್ತರದ ಪಟ್ಟಣವಾದ ಬೋಡಾ ಬಳಿ ಭಾನುವಾರ ದೋಣಿ ಮುಳುಗಿತ್ತು. ಮೊದಲಿಗೆ 24 ಮಂದಿ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಆದರೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
ದೋಣಿಯು ಸುಮಾರು 90 ಜನರನ್ನು ಹೊತ್ತೊಯ್ಯುತ್ತಿತ್ತು. ಅವರಲ್ಲಿ ಸುಮಾರು 50 ಜನರು ಶತಮಾನಗಳಷ್ಟು ಹಳೆಯದಾದ ಹಿಂದೂ ದೇವಾಲಯಕ್ಕೆ ಪ್ರಮುಖ ಹಬ್ಬಕ್ಕಾಗಿ ಹೋಗುತ್ತಿದ್ದ ಯಾತ್ರಾರ್ಥಿಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದರ ನಡುವೆ ಅನುಮತಿ ಪಡೆದ ಸಾಮರ್ಥ್ಯಕ್ಕಿಂತ ಮೂರು ಪಟ್ಟು ದೋಣಿಯನ್ನು ಹೊತ್ತೊಯ್ಯುತ್ತಿತ್ತು ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸಿರಾಜುಲ್ ಹುದಾ ಸೋಮವಾರ ತಿಳಿಸಿದ್ದಾರೆ.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…