Featured

ಬಾಂಗ್ಲಾದ 4,800 ಅಕ್ರಮ ವಲಸಿಗರು ಗಡಿಪಾರು :  ಸುವೇಂದು ಅಧಿಕಾರಿ – vishwanews24

ಬಾಂಗ್ಲಾದ 4,800 ಅಕ್ರಮ ವಲಸಿಗರು ಗಡಿಪಾರು :  ಸುವೇಂದು ಅಧಿಕಾರಿ

ಕೋಲ್ಕತ್ತಾ,: ಬಾಂಗ್ಲಾದೇಶದ 4,800 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಸಿಎಂ ಸುವೇಂದು ಅಧಿಕಾರಿ ತಿಳಿಸಿದ್ದಾರೆ.

“ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಯಶಸ್ವಿಯಾಗಿ ಗಡೀಪಾರು ಮಾಡಲಾಗಿದ್ದು, ಇನ್ನುಳಿದ 836 ಜನರ ಸ್ವದೇಶಿ ವಾಪಸಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ” ಎಂದು ಹೇಳಿದರು.

“ಗಡಿ ಭದ್ರತೆ ಮತ್ತು ಜನಗಣತಿ ಯೋಜನೆಗಳು ಗಡಿ ರಕ್ಷಣೆಯನ್ನು ಬಲಪಡಿಸುವುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರವು ಇನ್ನೂ ತಡೆಗೋಡೆ ನಿರ್ಮಾಣ ಬಾಕಿ ಇರುವ 556 ಕಿ.ಮೀ ವ್ಯಾಪ್ತಿಯ ಪೈಕಿ 100 ಕಿ.ಮೀ ಭೂಮಿಯನ್ನು ಈಗಾಗಲೇ ಭದ್ರತಾ ಪಡೆಗೆ ಹಸ್ತಾಂತರಿಸಿದೆ. ಈ ಪೈಕಿ ಉತ್ತರ ಬಂಗಾಳದ ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಚಿಕನ್ಸ್ ನೆಕ್ ವಲಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.

“ರಾಜ್ಯದಲ್ಲಿ ಪಾರದರ್ಶಕ ಆಡಳಿತವನ್ನು ತರಲು ಜನಗಣತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ ಮನೆ-ಮನೆ ಸಮೀಕ್ಷೆ ನಡೆಯಲಿದೆ. ಮುಂದಿನ ವರ್ಷದ ಫೆಬ್ರವರಿ ಅಂತ್ಯದ ವೇಳೆಗೆ ಈ ಪ್ರಕ್ರಿಯೆ ಪೂರ್ಣಗೊಂಡು, ಗಡಿ ವಿಂಗಡಣೆ ಕಾರ್ಯಗಳು ನಡೆಯಲಿವೆ” ಎಂದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

24 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

24 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago