ಬಾಂಬ್ ಆರೋಪಿ ಆದಿತ್ಯರಾವ್ ಬಗ್ಗೆ ಸಂಪೂರ್ಣ ತನಿಖೆಯಾಗಲಿ :ಸಿದ್ದರಾಮಯ್ಯ -Vishwanews24
ಮೈಸೂರು: ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣ ತನಿಖೆಗೆ ಸ್ಫೋಟಕ ತಿರುವು ದೊರೆತಿದೆ. ಬಾಂಬ್ ಪತ್ತೆ ಮತ್ತು ಹುಸಿ ಬಾಂಬ್ ಬೆದರಿಕೆಗೆ ಸಂಬಂಧಿಸಿ ಮಣಿಪಾಲದ ಕೆಎಚ್ಬಿ ಕಾಲೋನಿ ನಿವಾಸಿ ಆದಿತ್ಯ ರಾವ್(36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಸಿಕ್ಕ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣಾದ ಬಗ್ಗೆ ನನಗೆ ಇನ್ನೂ ಸಂಪೂರ್ಣ ಮಾಹಿತಿ ಇಲ್ಲ. ಆತನ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಒಟ್ಟಾರೆ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.
ಈತನನ್ನು ಬಂಧಿಸಿ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಈತ ಬೆಂಗಳೂರು ಡಿಜಿ ಕಚೇರಿಗೆ ಹೋಗಿ ನಾನೇ ಆದಿತ್ಯರಾವ್ ಅಂತ ಹೇಳಿಕೊಂಡಿದ್ದ. ತಕ್ಷಣ ಹೊಯ್ಸಳ ವಾಹನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈತನನ್ನು ಕರೆತರಲಾಗಿತ್ತು. ಠಾಣೆಗೆ ಬಂದ ಇನ್ಸ್ಪೆಕ್ಟರ್ ಹರಿವರ್ಧನ್, ಆದಿತ್ಯರಾವ್ ವಿಚಾರಣೆ ಮಾಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಕಡೆಯಿಂದ ಪೊಲೀಸರು ಈತನನ್ನು ರಹಸ್ಯ ಸ್ಥಳಕ್ಕೆ ಆಗಮಿಸಿದ್ದಾರೆ. ಇಲ್ಲಿ ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
