ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಆರೋಪಿ ಯಾವುದೇ ಸಂಘಟನೆಯವನಾಗಿದ್ದರೂ ಆತನ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರೋಪಿ ಆದಿತ್ಯ ರಾವ್ ಬೆಂಗಳೂರು ಡಿಜಿ ಕಚೇರಿಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಆತ ಯಾವ ಸಂಘಟನೆಗೆ ಸೇರಿದಾತ, ಅಥವಾ ಆತನೇ ವೈಯಕ್ತಿಕವಾಗಿ ಈ ಕೃತ್ಯಕ್ಕೆ ಕೈ ಹಾಕಿದ್ದಾನಾ, ಆತನಿಗೆ ಸ್ಪೋಟಕ ಹೇಗೆ ಲಭ್ಯವಾಯಿತು? ಆತನಿಗೆ ಯಾರಾದರೂ ಬಾಹ್ಯ ಬೆಂಬಲ ನೀಡಿದ್ದಾರಾ? ಎನ್ನುವ ಬಗ್ಗೆ ಇನ್ನಷ್ಟು ತನಿಖೆ ನಡೆಯಬೇಕಾಗಿದೆ.
ಪ್ರಕರಣದಲ್ಲಿ ಪೊಲೀಸರು ತ್ವರಿತಗತಿಯಲ್ಲಿ ಕೆಲಸ ಮಾಡಿದ್ದಾರೆ. ಇದು ನಮ್ಮ ಪೊಲೀಸರ ದಕ್ಷತೆ ಮತ್ತು ಪ್ರಾಮಾಣಿಕತೆ. ಸುಖಾಸುಮ್ಮನೆ ಯಾರೂ ಕೂಡ ಪೊಲೀಸ್ ಇಲಾಖೆ ಬಗ್ಗೆ ಅನಾವಶ್ಯಕವಾಗಿ ಬೊಟ್ಟು ಮಾಡುವುದು ಸರಿಯಲ್ಲ. ಪೊಲೀಸರ ನೈತಿಕತೆ ಕುಗ್ಗುವ ಕೆಲಸವನ್ನು ಯಾರೂ ಸಹ ಮಾಡಬಾರದು ಎಂದರು.
ಇನ್ನು ಶರಣಾಗಿರುವ ಆರೋಪಿ ಯಾವುದೇ ಸಂಘಟನೆಯವನಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಸಂಘಟನೆ ಜೊತೆ ಸಂಪರ್ಕವಿದ್ದರೂ ತನಿಖೆ ವೇಳೆ ಎಲ್ಲಾ ವಿಚಾರಗಳು ಬಹಿರಂಗ ಆಗುತ್ತೆ. ಕೇಂದ್ರದ ತಂಡ ಈಗಾಗಲೇ ಬಂದು ತನಿಖೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…