ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಆರೋಪಿ ಯಾವುದೇ ಸಂಘಟನೆಯವನಾಗಿದ್ದರೂ ಆತನ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರೋಪಿ ಆದಿತ್ಯ ರಾವ್ ಬೆಂಗಳೂರು ಡಿಜಿ ಕಚೇರಿಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಆತ ಯಾವ ಸಂಘಟನೆಗೆ ಸೇರಿದಾತ, ಅಥವಾ ಆತನೇ ವೈಯಕ್ತಿಕವಾಗಿ ಈ ಕೃತ್ಯಕ್ಕೆ ಕೈ ಹಾಕಿದ್ದಾನಾ, ಆತನಿಗೆ ಸ್ಪೋಟಕ ಹೇಗೆ ಲಭ್ಯವಾಯಿತು? ಆತನಿಗೆ ಯಾರಾದರೂ ಬಾಹ್ಯ ಬೆಂಬಲ ನೀಡಿದ್ದಾರಾ? ಎನ್ನುವ ಬಗ್ಗೆ ಇನ್ನಷ್ಟು ತನಿಖೆ ನಡೆಯಬೇಕಾಗಿದೆ.
ಪ್ರಕರಣದಲ್ಲಿ ಪೊಲೀಸರು ತ್ವರಿತಗತಿಯಲ್ಲಿ ಕೆಲಸ ಮಾಡಿದ್ದಾರೆ. ಇದು ನಮ್ಮ ಪೊಲೀಸರ ದಕ್ಷತೆ ಮತ್ತು ಪ್ರಾಮಾಣಿಕತೆ. ಸುಖಾಸುಮ್ಮನೆ ಯಾರೂ ಕೂಡ ಪೊಲೀಸ್ ಇಲಾಖೆ ಬಗ್ಗೆ ಅನಾವಶ್ಯಕವಾಗಿ ಬೊಟ್ಟು ಮಾಡುವುದು ಸರಿಯಲ್ಲ. ಪೊಲೀಸರ ನೈತಿಕತೆ ಕುಗ್ಗುವ ಕೆಲಸವನ್ನು ಯಾರೂ ಸಹ ಮಾಡಬಾರದು ಎಂದರು.
ಇನ್ನು ಶರಣಾಗಿರುವ ಆರೋಪಿ ಯಾವುದೇ ಸಂಘಟನೆಯವನಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಸಂಘಟನೆ ಜೊತೆ ಸಂಪರ್ಕವಿದ್ದರೂ ತನಿಖೆ ವೇಳೆ ಎಲ್ಲಾ ವಿಚಾರಗಳು ಬಹಿರಂಗ ಆಗುತ್ತೆ. ಕೇಂದ್ರದ ತಂಡ ಈಗಾಗಲೇ ಬಂದು ತನಿಖೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…