Featured

ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕನ ಚಿಕಿತ್ಸೆ ವೆಚ್ಚ ಜನಪ್ರತಿನಿಧಿಗಳು ಸೇರಿ ಬಿಜೆಪಿ ಭರಿಸಲಿದೆ : ಸಚಿವ ಸುನಿಲ್ ಕುಮಾರ್ – Vishwanews24

ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕನ ಚಿಕಿತ್ಸೆ ವೆಚ್ಚ ಜನಪ್ರತಿನಿಧಿಗಳು ಸೇರಿ ಬಿಜೆಪಿ ಭರಿಸಲಿದೆ : ಸುನಿಲ್ ಕುಮಾರ್

ಮಂಗಳೂರು : ಮಂಗಳೂರಿನ ಗರೋಡಿಯಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಅವರ ಚಿಕಿತ್ಸೆ ವೆಚ್ಚವನ್ನು ಜನಪ್ರತಿನಿಧಿಗಳು ಸೇರಿ ಬಿಜೆಪಿಯಿಂದ ಭರಿಸಲಿದ್ದೇವೆ. ಅವರಿಗೆ ಸರ್ಕಾರದಿಂದ ಪರಿಹಾರ ನೀಡುವುದಕ್ಕೂ ಕ್ರಮ ಕೈಗೊಳ್ಳಲಾಗುವುದು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ‘ಈ ಘಟನೆಯನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಈ ಘಟನೆ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆಹಚ್ಚಲು ಹಾಗೂ ಇದರ ಆಳ ಮತ್ತು ಅಗಲವನ್ನು ಅರಿತು, ಈ ಪ್ರಕರಣವನ್ನು ಸಂಪೂರ್ಣವಾಗಿ ಭೇದಿಸುವ ಉದ್ದೇಶದಿಂದ ಇದರ ತನಿಖೆಯನ್ನು ರಾಷ್ಟ್ರೀಯ ತನಿಖೆ ಸಂಸ್ಥೆಗೆ ಹಸ್ತಾಂತರ ಮಾಡಲಾಗಿದೆ’ ಎಂದರು..

ಮೊನ್ನೆ ನಡೆದ ಘಟನೆಯ ಮುಂದುವರಿದ ಭಾಗವಾಗಿ ಕದ್ರಿ ದೇವಸ್ಥಾನದಲ್ಲಿ ಇಂತಹದ್ದೇ ಘಟನೆ ನಡೆಸಲು ಸಂಚು ರೂಪಿಸಿದ್ದರು, ಇನ್ಯಾವುದೋ ಕಚೇರಿಗಳನ್ನು ಹಾಗೂ ಸಾರ್ವಜನಿಕ ಸ್ಥಳಗಳನ್ನು ಗುರಿಯಾಗಿಸಿ ಕೊಂಡಿದ್ದರು ಎಂದು ಗೋತ್ತಾಗಿದೆ. ಹಿಂದೂ ಸಮಾಜವನ್ನು ಗುರಿಯನ್ನಾಗಿಸುವುದೇ ಇದರ ಒಟ್ಟು ಉದ್ದೇಶ ಎಂಬುದು ಇದರಿಂದ ಮನದಟ್ಟಾಗುತ್ತದೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ದೊಡ್ಡ ಮಟ್ಟದ ಷಡ್ಯಂತ್ರ ನಡೆದಿದೆ. ಆದರೆ ಈ ಸಂಚು ವಿಫಲವಾಗಿದೆ. ಈ ಮಾನಸಿಕತೆಯೇ ದೂರ ಆಗಬೇಕು’ ಎಂದು ತಿಳಿಸಿದರು. ‘ರಾಷ್ಟ್ರೀಯ ತನಿಖೆ ಸಂಸ್ಥೆ ಮೇಲೆ ಹಾಗೂ ಪೊಲೀಸರ ಮೇಲೆ ವಿಶ್ವಾಸ ಇದೆ. ಇಂತಹ ಸಂಘಟನೆಗಳು ಮತ್ತೆ ಚಿಗುರೊಡೆಯಲಿಕ್ಕೆ ಅವರು ಬಿಡುವುದಿಲ್ಲ’ ಎಂದು ಹೇಳಿದರು

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago