Featured

ಬಾಕ್ಸಿಂಗ್​ಗೆ ನಿವೃತ್ತಿ ಘೋಷಿಸಿದ ವಿಶ್ವ ಚಾಂಪಿಯನ್ ಮೇರಿ ಕೋಮ್ – vishwanews24

ಬಾಕ್ಸಿಂಗ್ ಇತಿಹಾಸದಲ್ಲಿ 6 ವಿಶ್ವ ಪ್ರಶಸ್ತಿ ಗೆದ್ದ ಮೊದಲ ಮಹಿಳಾ ಬಾಕ್ಸರ್ ಮೇರಿ ಕೋಮ್

ಅಸ್ಸಾಂ : ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಹಾಗೂ ಸ್ಟಾರ್ ಇಂಡಿಯಾ ಬಾಕ್ಸರ್ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬುಧವಾರ ಬಾಕ್ಸಿಂಗ್​ಗೆ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ ಕೈಗವಸು ಕಳಚಿ ಗೋಡೆಗೆ ನೇತು ಹಾಕಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್​​(IBA) ನಿಯಮಗಳ ಪ್ರಕಾರ ಪುರುಷ ಮತ್ತು ಮಹಿಳಾ ಬಾಕ್ಸರ್​ಗಳು 40 ವರ್ಷ ವಯಸ್ಸಿನವರೆಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ.

ತಮಗೆ ಆಡುವ ಹಂಬಲ ಇದ್ದರೂ 41 ವರ್ಷದ ಮೇರಿ ಕೋಮ್​, ನಿಯಮಗಳ ಪ್ರಕಾರ ವಯಸ್ಸಿನ ಮಿತಿಯಿಂದ ತನ್ನ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನನಗೆ ಇನ್ನೂ ಹಸಿವು ಇದೆ. ಆದರೆ ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ ನಾನು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗಿನ್ನೂ ಆಡುವ ಸಾಮರ್ಥ್ಯ ಇದೆ. ಆದರೆ ವಯಸ್ಸಿನ ಮಿತಿಯಿಂದಾಗಿ ಬಾಕ್ಸಿಂಗ್​​ನಿಂದ ಹಿಂದೆ ಸರಿಯುತ್ತಿದ್ದೇನೆ. ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದೆ ಇದೀಗ ನಿವೃತ್ತಿ ಹೊಂದುವ ಸಮಯ’ ಎಂದು ತಿಳಿಸಿದ್ದಾರೆ.

6 ವಿಶ್ವ ಪ್ರಶಸ್ತಿ ಗೆದ್ದ ಮೊದಲ ಮಹಿಳಾ ಬಾಕ್ಸರ್: ಬಾಕ್ಸಿಂಗ್ ಇತಿಹಾಸದಲ್ಲಿ ಆರು ವಿಶ್ವ ಪ್ರಶಸ್ತಿಗಳನ್ನು ಗೆದ್ದ ಮೊದಲ ಮಹಿಳಾ ಬಾಕ್ಸರ್ ಮೇರಿ ಕೋಮ್‌. ಐದು ಬಾರಿ ಏಷ್ಯನ್ ಚಾಂಪಿಯನ್ ಆಗಿರುವ ಅವರು 2014ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದ ಭಾರತದ ಮೊದಲ ಮಹಿಳಾ ಬಾಕ್ಸರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 hour ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

3 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

3 hours ago