Featured

ಬಾಕ್ಸ್​ ಆಫೀಸ್​ನಲ್ಲಿ ದಾಖಲೆ ಬರೆದ ರಜನಿ-ಅಕ್ಷಯ್‌ 2.0 ಸಿನಿಮಾ..

ಹೊಸದಿಲ್ಲಿ : ಸೂಪರ್‌ಸ್ಟಾರ್‌ ರಜನೀಕಾಂತ್‌ ಮತ್ತು ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ.

ಬಿಡುಗಡೆಗೆ ಮೊದಲೇ ಬಹುನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ 2.0 ನ.29ರಂದು ಬಿಡುಗಡೆಯಾಗಿತ್ತು. ಬಾಹುಬಲಿ (ಮೊದಲನೇ ಭಾಗ) ಚಲನಚಿತ್ರ ತನ್ನ ಇಡೀ ಪ್ರದರ್ಶನದಲ್ಲಿ ಗಳಿಸಿದಷ್ಟನ್ನು ಒಂದೇ ವಾರದಲ್ಲಿ ಸಂಪಾದಿಸಿ ಬಾಹುಬಲಿ ದಾಖಲೆ ಮುರಿದಿತ್ತು. 2.0 ಸದ್ಯ ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿದ ಚಿತ್ರಗಳ ಪಟ್ಟಿಯಲ್ಲಿ 12 ನೇ ಸ್ಥಾನ ಪಡೆದುಕೊಂಡಿದೆ.

ದಂಗಲ್​, ಟೈಗರ್​ ಜಿಂದಾ ಹೈ, ಪದ್ಮಾವತ್​, ಸಂಜು, ಸುಲ್ತಾನ್​ ಸಿನಿಮಾಗಳು ವಿಶ್ವದಾದ್ಯಂತ ಪ್ರದರ್ಶನಗೊಂಡು ಗಳಿಸಿದ್ದ ಮೊತ್ತವನ್ನೂ 2.0 ಚಿತ್ರ ಮೀರಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

2.0 ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದವರು ಶಂಕರ್‌. ಇದು 500 ಕೋಟಿ ರೂ. ವೆಚ್ಚದ ನಿರ್ಮಾಣ. 3ಡಿ ಯಲ್ಲಿ ನಿರ್ಮಾಣಗೊಂಡ ಮತ್ತು ವಿಶ್ವಾದ್ಯಂತ 1,500 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ತೆರೆಕಂಡ ಮೊತ್ತ ಮೊದಲ ಭಾರತೀಯ ಚಿತ್ರ.

ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು 2.0 ಸಿನಿಮಾದ ಜಗತ್ತಿನಾದ್ಯಂತ ಪ್ರದರ್ಶನ, ಗಳಿಕೆ ಬಗ್ಗೆ ಟ್ವೀಟ್ ಮಾಡಿದ್ದು, ಮೊದಲವಾರದಲ್ಲೇ 500 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

22 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

48 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

56 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago