Featured

ಬಾಗಲಕೋಟೆ: ಅನ್ಯಜಾತಿ ಯುವಕನೊಂದಿಗೆ ಮಗಳ ಪ್ರೀತಿ : ಮದುವೆ ಮಾಡುವುದಾಗಿ ನಂಬಿಸಿ ತಂದೆಯಿಂದ ಪ್ರೇಮಿಗಳ ಮರ್ಯಾದಾ ಹತ್ಯೆ; ಮೂವರ ಬಂಧನ – Vishwanews24

ಬಾಗಲಕೋಟೆ: ಅನ್ಯಜಾತಿ ಯುವಕನೊಂದಿಗೆ ಮಗಳ ಪ್ರೀತಿ : ಮದುವೆ ಮಾಡುವುದಾಗಿ ನಂಬಿಸಿ ತಂದೆಯಿಂದ ಪ್ರೇಮಿಗಳ ಮರ್ಯಾದಾ ಹತ್ಯೆ; ಮೂವರ ಬಂಧನ

ಬಾಗಲಕೋಟೆ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಳೆಂಬ ಕಾರಣಕ್ಕೆ ಮಗಳು ಹಾಗೂ ಆಕೆಯ ಪ್ರಿಯಕರನನ್ನು ತಂದೆ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಬೇವಿನಮಟ್ಟಿಯಲ್ಲಿ ನಡೆದಿದೆ.

ಬಾಗಲಕೋಟೆಯ ಬೇವಿನಮಟ್ಟಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಬೇವಿನಮಟ್ಟಿ ಗ್ರಾಮದ 18ವರ್ಷದ ರಾಜೇಶ್ವರಿ ಕರಡಿ 24 ವರ್ಷದ ವಿಶ್ವನಾಥ್​ ನೆಲಗಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇದೀಗ ಇಬ್ಬರದ್ದು ಕೊಲೆಯಾಗಿದ್ದು, ಆದರೆ ಶವಗಳು ಪತ್ತೆಯಾಗಿಲ್ಲ.

ಕಳೆದ ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಯುವತಿ ಪೋಷಕರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆಕೆಗೆ ಎಚ್ಚರಿಕೆ ನೀಡಿದ್ದಾರೆ. ಆತ ಕೆಳ ಜಾತಿಯವನಾಗಿದ್ದು, ಆತನ ಜೊತೆಗಿನ ಒಡನಾಟ ಬಿಡುವಂತೆ ಬುದ್ದಿ ಹೇಳಿದ್ದಾರೆ, ಜಾತಿ ವಿಚಾರವಾಗಿ ಈ ಹಿಂದೆ ಎರಡೂ ಕುಟುಂಬಗಳಲ್ಲಿ ಜಗಳವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೇವಿನಮಟ್ಟಿ, ಹನುಮಂತ ಬೇವಿನಮಟ್ಟಿ ಹಾಗೂ ಬೀರಪ್ಪ ದಳವಿ ಎಂಬ ಮೂವರನ್ನು ಬಂಧಿಸಲಾಗಿದೆ.

ಆರಂಭದಲ್ಲಿ ಜೋಡಿ ಓಡಿ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಯುವಕನ ತಾಯಿ ಮಗ ಕಾಣಿಸುತ್ತಿಲ್ಲ ಎಂದು ದೂರು ದಾಖಲಿಸಿದ್ದರು. ಇತ್ತ ಮಗಳನ್ನು ಅಪಹರಿಸಲಾಗಿದೆ ಎಂದು ಅಪ್ರಾಪ್ತೆಯ ಪೋಷಕರು ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ವೇಳೆ ಅಪ್ರಾಪ್ತೆಯ ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರ್ಯಾದಾ ಹತ್ಯೆ ಬೆಳಕಿಗೆ ಬಂದಿದೆ. ಇದನ್ನೂ ಓದಿ : ಮಳವಳ್ಳಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಬಾಲಕಿ ನಿವಾಸಕ್ಕೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹ್ಮದ್ ಖಾನ್ ಭೇಟಿ..ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್ ..

ವಿಶ್ವನಾಥ್ ಅವರ ಪೋಷಕರು ಜೀವನೋಪಾಯಕ್ಕಾಗಿ ಕೇರಳದ ಕಾಸರಗೋಡಿಗೆ ಕಳುಹಿಸಿದ್ದರು, ಅಲ್ಲಿಆತ ದಿನಗೂಲಿ ಕೆಲಸ ಮಾಡಲು ಪ್ರಾರಂಭಿಸಿದ್ದ. ಅಷ್ಟರಲ್ಲಿ ರಾಜೇಶ್ವರಿ ತನ್ನ ತಂದೆ-ತಾಯಿಗೆ ವಿಶ್ವನಾಥ್ ನನ್ನು ಮದುವೆಯಾಗುವ ಇಚ್ಛೆಯನ್ನು ತಿಳಿಸಿದ್ದಳು.

ಯುವತಿಯ ಕುಟುಂಬಸ್ಥರು ಹೆಣೆದ ಬಲೆಗೆ ವಿಶ್ವನಾಥ್‌ ಬಿದ್ದಿದ್ದ. ಮದುವೆ ಮಾಡಿಕೊಡುವುದಾಗಿ ಹೇಳಿ ಆತನನ್ನು ಕರೆಸಿಕೊಂಡಿದ್ದಾರೆ. ವಿಶ್ವನಾಥ್ ನರಗುಂದ ತಲುಪಿದಾಗ ಯುವತಿಯನ್ನು ಬೇರೆ ವಾಹನದಲ್ಲಿ ಕರೆತರುವಾಗ ಆರೋಪಿಗಳು ಆತನನ್ನು ಜೀಪಿನಲ್ಲಿ ಕೂಡಿ ಹಾಕಿದ್ದರು. ಇಬ್ಬರನ್ನೂ ವಾಹನದಲ್ಲಿಯೇ ಹತ್ಯೆ ಮಾಡಿ, ಶವಗಳನ್ನು ಕೃಷ್ಣಾ ನದಿಗೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ ಮೃತದೇಹಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ’ ಎಂದು ಎಸ್‌ಪಿ ತಿಳಿಸಿದರು. ಇದನ್ನೂ ಓದಿ : ಪರೇಶ್ ಮೇಸ್ತ ಪ್ರಕರಣ : ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ : ಸಿಬಿಐ ವರದಿಯಲ್ಲಿ ಉಲ್ಲೇಖ – Vishwanews24

ಎರಡು ದಿನಗಳಿಂದ ವಿಶ್ವನಾಥ್ ಅವರನ್ನು ಸಂಪರ್ಕಿಸಲು ಸಾಧ್ಯವಾಗದಿದ್ದಾಗ, ಆತನ ಪೋಷಕರು ಅಕ್ಟೋಬರ್ 3 ರಂದು ನರಗುಂದ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಬಾಲಕಿಯ ಕುಟುಂಬದವರು ಅಕ್ಟೋಬರ್ 7 ರಂದು ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಹರಣದ ದೂರು ದಾಖಲಿಸಿದ್ದರು. ಕೃತ್ಯದಲ್ಲಿ ರಾಜೇಶ್ವರಿ ಅವರ ಪೋಷಕರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

54 seconds ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

28 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago