Featured

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ;  ಮಹಿಳೆಯ ಎರಡೂ ಕೈಗಳು ತುಂಡು – vishwanews24

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ;  ಮಹಿಳೆಯ ಎರಡೂ ಹಸ್ತಗಳು ಛಿದ್ರ

ಬಾಗಲಕೋಟೆ: ಹೇರ್ ಡ್ರೈಯರ್ ಮೆಷಿನ್‌ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾದ ಘಟನೆ ಜಿಲ್ಲೆಯ ಇಳಕಲ್ಲದ ಬಸವನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಎರಡೂ ಕೈ ತುಂಡಾದ‌ ಮಹಿಳೆಯನ್ನು ಬಸವರಾಜೇಶ್ವರಿ ಯರನಾಳ ಎಂದು ಗುರುತಿಸಲಾಗಿದೆ. ಈ ಘಟನೆ ನ.15ರಂದು ನಡೆದಿದ್ದು, ಇಳಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವರಾಜೇಶ್ವರಿ ಪತಿ ಪಾಪಣ್ಣ ಯರನಾಳ ಸೈನಿಕರಾಗಿದ್ದು, 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಮೃತಪಟ್ಟಿದ್ದರು. ಸದ್ಯ ಬಸವರಾಜೇಶ್ವರಿ ಅವರು ಮಕ್ಕಳೊಂದಿಗೆ ಇಳಕಲ್ಲದಲ್ಲಿ ವಾಸಿಸುತ್ತಿದ್ದು, ಪಕ್ಕದ ಮನೆಯವರಿಗೆ ಬಂದಿದ್ದ ಕೋರಿಯರ್ ಪಾರ್ಸೆಲ್ ಆಗಿ ಬಂದಿದ್ದ ಹೇರ್ ಡ್ರೈಯರ್ ತೆಗೆದು ಸ್ಚಿಚ್ ಬೋರ್ಡ್ ಗೆ ಹಾಕಿ ಆನ್ ಮಾಡಿದಾಗ ಸ್ಪೋಟಗೊಂಡಿದೆ. ಆಗ ಎರಡೂ ಕೈಗಳು ತುಂಡಾಗಿವೆ. ಸದ್ಯ ಇಳಕಲ್ಲದ ಪಾಟೀಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಶಿಕಲಾ ಹೆಸರಲ್ಲಿ ಕೋರಿಯರ್:

ಬಸವನಗರದ ಶಶಿಕಲಾ ಎಂಬವರ ಹೆಸರಿಗೆ ಬಾಗಲಕೋಟೆಯ ಡಿಟಿಡಿಸಿ ಕೋರಿಯರ್ ಬಾಕ್ಸ್ ಬಂದಿದ್ದು, ಕೋರಿಯರ್ ಬಾಯ್ ಶಶಿಕಲಾ ಅವರ ನಂಬರ್ ಗೆ ಕಾಲ್ ಮಾಡಿದಾಗ, ನಾನು ಊರಲ್ಲಿ ಇಲ್ಲ ಪಕ್ಕದ ಮನೆಯ ಬಸವರಾಜೇಶ್ವರಿ ಅವರ‌ ಮನೆಯಲ್ಲಿ ಪಾರ್ಸೆಲ್ ಕೊಡಲು ಹೇಳಿದ್ದರು. ‌ಅಲ್ಲದೇ ನಾನು ಯಾವುದೇ ಆನ್‌ ಲೈನ್ ಪ್ರಾಡಕ್ಟ್‌ ಆರ್ಡರ್‌ ಮಾಡಿಲ್ಲ. ಅದರಲ್ಲಿ ಏನಿದೆ ಎಂದು ಪ್ರಶ್ನಿಸಿದ್ದರು. ಕೋರಿಯರ್ ಪಾರ್ಸೆಲ್ ಪಡೆದ ಬಸವರಾಜೇಶ್ವರಿ ಯರನಾಳ ಅವರು, ಬಾಕ್ಸ್‌ ತೆರೆದು ನೋಡಿದಾಗ ಹೇರ್ ಡ್ರೈಯರ್ ಇದೆ ಎಂದು ತಿಳಿಸಿದ್ದಾರೆ.

ಅದೇ ವೇಳೆಗೆ ಪಕ್ಕದ ಮನೆಯವರು ಬಂದಿದ್ದು, ಆನ್ ಮಾಡಿ ತೋರಿಸಿ ಎಂದು ಕೇಳಿದ್ದು, ಆಗ ಬಸವರಾಜೇಶ್ವರಿ, ಅದನ್ನು ಆನ್ ಮಾಡಲು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಹಾಕಿ, ಆನ್ ಮಾಡಿದ್ದರು. ಆಗ ಸ್ಪೋಟಗೊಂಡು, ಎರಡೂ ಕೈ ತುಂಡಾಗಿವೆ.

ಪೊಲೀಸರ ತನಿಖೆ:

ಶಶಿಕಲಾ ಅವರು ಹೇರ್ ಡ್ರೈಯರ್‌ ಆರ್ಡರ್‌ ಮಾಡಿರಲಿಲ್ಲ. ಅವರ ಹೆಸರಿನಲ್ಲಿ ಪಾರ್ಸೆಲ್ ಹೇಗೆ ಬಂತು. ಡ್ರೈಯರ್ ಆರ್ಡರ್‌ ಮಾಡಿದವರು ಯಾರು, ಹಣ ಯಾರು ಸಂದಾಯ ಮಾಡಿದರು, ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಶಾಖಪಟ್ಟಣದ ಮೆನು ಫ್ಯಾಕ್ಟರ್ ನ ಹೇರ್ ಡ್ರೈಯರ್ ಇದ್ದು, ಅದು ಬಾಗಲಕೋಟೆಯಿಂದ ಇಳಕಲ್ಲಗೆ ಕೋರಿಯರ್ ಕಳುಹಿಸಲಾಗಿದೆ.

ಇಳಕಲ್ಲ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜೇಶ್ವರಿ ಅವರನ್ನು ಹುನಗುಂದ ಶಾಸಕ‌ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

15 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

15 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

18 hours ago