Featured

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ;  ಮಹಿಳೆಯ ಎರಡೂ ಕೈಗಳು ತುಂಡು – vishwanews24

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ;  ಮಹಿಳೆಯ ಎರಡೂ ಹಸ್ತಗಳು ಛಿದ್ರ

ಬಾಗಲಕೋಟೆ: ಹೇರ್ ಡ್ರೈಯರ್ ಮೆಷಿನ್‌ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾದ ಘಟನೆ ಜಿಲ್ಲೆಯ ಇಳಕಲ್ಲದ ಬಸವನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಎರಡೂ ಕೈ ತುಂಡಾದ‌ ಮಹಿಳೆಯನ್ನು ಬಸವರಾಜೇಶ್ವರಿ ಯರನಾಳ ಎಂದು ಗುರುತಿಸಲಾಗಿದೆ. ಈ ಘಟನೆ ನ.15ರಂದು ನಡೆದಿದ್ದು, ಇಳಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವರಾಜೇಶ್ವರಿ ಪತಿ ಪಾಪಣ್ಣ ಯರನಾಳ ಸೈನಿಕರಾಗಿದ್ದು, 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಮೃತಪಟ್ಟಿದ್ದರು. ಸದ್ಯ ಬಸವರಾಜೇಶ್ವರಿ ಅವರು ಮಕ್ಕಳೊಂದಿಗೆ ಇಳಕಲ್ಲದಲ್ಲಿ ವಾಸಿಸುತ್ತಿದ್ದು, ಪಕ್ಕದ ಮನೆಯವರಿಗೆ ಬಂದಿದ್ದ ಕೋರಿಯರ್ ಪಾರ್ಸೆಲ್ ಆಗಿ ಬಂದಿದ್ದ ಹೇರ್ ಡ್ರೈಯರ್ ತೆಗೆದು ಸ್ಚಿಚ್ ಬೋರ್ಡ್ ಗೆ ಹಾಕಿ ಆನ್ ಮಾಡಿದಾಗ ಸ್ಪೋಟಗೊಂಡಿದೆ. ಆಗ ಎರಡೂ ಕೈಗಳು ತುಂಡಾಗಿವೆ. ಸದ್ಯ ಇಳಕಲ್ಲದ ಪಾಟೀಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಶಿಕಲಾ ಹೆಸರಲ್ಲಿ ಕೋರಿಯರ್:

ಬಸವನಗರದ ಶಶಿಕಲಾ ಎಂಬವರ ಹೆಸರಿಗೆ ಬಾಗಲಕೋಟೆಯ ಡಿಟಿಡಿಸಿ ಕೋರಿಯರ್ ಬಾಕ್ಸ್ ಬಂದಿದ್ದು, ಕೋರಿಯರ್ ಬಾಯ್ ಶಶಿಕಲಾ ಅವರ ನಂಬರ್ ಗೆ ಕಾಲ್ ಮಾಡಿದಾಗ, ನಾನು ಊರಲ್ಲಿ ಇಲ್ಲ ಪಕ್ಕದ ಮನೆಯ ಬಸವರಾಜೇಶ್ವರಿ ಅವರ‌ ಮನೆಯಲ್ಲಿ ಪಾರ್ಸೆಲ್ ಕೊಡಲು ಹೇಳಿದ್ದರು. ‌ಅಲ್ಲದೇ ನಾನು ಯಾವುದೇ ಆನ್‌ ಲೈನ್ ಪ್ರಾಡಕ್ಟ್‌ ಆರ್ಡರ್‌ ಮಾಡಿಲ್ಲ. ಅದರಲ್ಲಿ ಏನಿದೆ ಎಂದು ಪ್ರಶ್ನಿಸಿದ್ದರು. ಕೋರಿಯರ್ ಪಾರ್ಸೆಲ್ ಪಡೆದ ಬಸವರಾಜೇಶ್ವರಿ ಯರನಾಳ ಅವರು, ಬಾಕ್ಸ್‌ ತೆರೆದು ನೋಡಿದಾಗ ಹೇರ್ ಡ್ರೈಯರ್ ಇದೆ ಎಂದು ತಿಳಿಸಿದ್ದಾರೆ.

ಅದೇ ವೇಳೆಗೆ ಪಕ್ಕದ ಮನೆಯವರು ಬಂದಿದ್ದು, ಆನ್ ಮಾಡಿ ತೋರಿಸಿ ಎಂದು ಕೇಳಿದ್ದು, ಆಗ ಬಸವರಾಜೇಶ್ವರಿ, ಅದನ್ನು ಆನ್ ಮಾಡಲು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಹಾಕಿ, ಆನ್ ಮಾಡಿದ್ದರು. ಆಗ ಸ್ಪೋಟಗೊಂಡು, ಎರಡೂ ಕೈ ತುಂಡಾಗಿವೆ.

ಪೊಲೀಸರ ತನಿಖೆ:

ಶಶಿಕಲಾ ಅವರು ಹೇರ್ ಡ್ರೈಯರ್‌ ಆರ್ಡರ್‌ ಮಾಡಿರಲಿಲ್ಲ. ಅವರ ಹೆಸರಿನಲ್ಲಿ ಪಾರ್ಸೆಲ್ ಹೇಗೆ ಬಂತು. ಡ್ರೈಯರ್ ಆರ್ಡರ್‌ ಮಾಡಿದವರು ಯಾರು, ಹಣ ಯಾರು ಸಂದಾಯ ಮಾಡಿದರು, ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಶಾಖಪಟ್ಟಣದ ಮೆನು ಫ್ಯಾಕ್ಟರ್ ನ ಹೇರ್ ಡ್ರೈಯರ್ ಇದ್ದು, ಅದು ಬಾಗಲಕೋಟೆಯಿಂದ ಇಳಕಲ್ಲಗೆ ಕೋರಿಯರ್ ಕಳುಹಿಸಲಾಗಿದೆ.

ಇಳಕಲ್ಲ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜೇಶ್ವರಿ ಅವರನ್ನು ಹುನಗುಂದ ಶಾಸಕ‌ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

3 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

7 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago