Featured

ಬಾಣಂತಿಯರ ಸರಣಿ ಸಾವು ಪ್ರಕರಣ : ಬಳ್ಳಾರಿ ಜಿಲ್ಲಾಸ್ಪತ್ರೆಗೆ  ಲೋಕಾಯುಕ್ತ ಅಧಿಕಾರಿಗಳು ದಾಳಿ – vishwanews24

ಬಾಣಂತಿಯರ ಸರಣಿ ಸಾವು ಪ್ರಕರಣ : ಬಳ್ಳಾರಿ ಜಿಲ್ಲಾಸ್ಪತ್ರೆಗೆ  ಲೋಕಾಯುಕ್ತ ಅಧಿಕಾರಿಗಳು ದಾಳಿ

ಬಳ್ಳಾರಿ: ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಲೋಕಾಯುಕ್ತ ಪರಿಶೀಲನೆ ಮಾಡಿದೆ. ಐವಿ ಹಾಗೂ ಆರ್‌ಎಲ್ ಫ್ಲೂಯಿಡ್ ಔಷಧಿ ಬಂದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಐವಿ ದ್ರಾವಣ ಹಾಗೂ ಬಾಣಂತಿಯರ ಅಸ್ವಸ್ಥ ಆದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ರಿಯಾಕ್ಷನ್ ಆಗಿರುವ ಗ್ಲುಕೋಸ್, ಸೀಜ್ ಆಗಿರುವ 280 ಐವಿ ಫ್ಲೂಯಿಡ್ ಆರ್‌ಎಲ್ ಬಾಟಲ್ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಸೂಚನೆ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago