Featured

ಬಾಣಂತಿಯರ ಸಾವು ಪ್ರಕರಣ : ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ : ದಿನೇಶ್ ಗುಂಡೂರಾವ್ – vishwanews24

ಬಳ್ಳಾರಿ ಬಾಣಂತಿಯರ ಸಾವಿನ ಬಗ್ಗೆ ಸರ್ಕಾರ ಗಂಭೀರವಾಗಿದೆ..

ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ

ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಎಂದಾದರೆ ಅದಕ್ಕೂ ಸಿದ್ಧ..

ಬೆಂಗಳೂರು: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ. ಇದು ಜೀವಕ್ಕೆ ಸಂಬಂಧಿಸಿದ ವಿಚಾರ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಎಂಬುದೇ ಆದರೆ ಅದಕ್ಕೂ ಸಿದ್ಧ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ ಎಂದರು.

ಬಳ್ಳಾರಿಯಲ್ಲಿ 9 ಜನರಿಗೆ ಸಮಸ್ಯೆ ಆಗಿತ್ತು. ನಾಲ್ವರು ತೀರಿಕೊಂಡಿದ್ದಾರೆ. ಐದನೇಯವರು ಚಿಕಿತ್ಸೆ ಪಡೆಯುತ್ತಿದ್ದರು. ಅವರೂ ತೀರಿಕೊಂಡಿದ್ದಾರೆ. ಅದೇ ಬ್ಯಾಚ್​ನ ರಿಂಗರ್ ಲ್ಯಾಕ್ಟೇಟ್ ದ್ರಾವಣ‌ ಕೊಡಲಾಗಿತ್ತು. ಈಗಾಗಲೇ ಕಂಪೆನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಆದರೆ, ಚೇತರಿಸಿಕೊಳ್ಳುತ್ತಿದ್ದರು ಎಂದು ವೈದ್ಯರು ಹೇಳಿದ್ದರು. ಆದರೆ ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದು ಸಚಿವರು ಹೇಳಿದರು.

ಬಿಜೆಪಿಯವರು ಖಂಡಿತವಾಗಿಯೂ ಲೋಕಾಯುಕ್ತಕ್ಕೆ ದೂರು ನೀಡಲಿ. ನನ್ನ ರಾಜೀನಾಮೆಯಿಂದ ಸರಿಯಾಗಲಿದೆ ಎಂದಾದರೆ ಅದಕ್ಕೂ ಸಿದ್ಧ. ಆದರೆ, ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago