ಮಡಿಕೇರಿ: ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಕೊಡಗಿನ ವಿರಾಜಪೇಟೆಯಲ್ಲಿ ಮಾತಾನಾಡಿದ ಅವರು, ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು. ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದರು ಎಂದಿದ್ದಾರೆ.
ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ಕೊಟ್ಟಿರುವ ಕೊಡುಗೆಗಳು ಅಪಾರವಾಗಿದೆ. ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದಿದ್ದಾರೆ.
ವೀಕೆಂಡ್ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…