ಮೈಸೂರು: ಮುಸ್ಲಿಂ ಧರ್ಮದಲ್ಲಿ ಕುಂಕುಮ ಹಣೆಗಿಡುವ ಪದ್ಧತಿಯಿದೆಯೇ, ನಾಡಹಬ್ಬ ದಸರಾ ಉದ್ಘಾಟನೆಗೆ ಬರಲು ಕುಂಕುಮ ಹಣೆಗೆ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ಕನ್ನಡಾಂಬೆಯ ಕುಂಕುಮ ಬಗ್ಗೆ ಮಾತನಾಡಿದ್ದಾರೆಯೇ ಇಲ್ಲವೇ ಎಂದು ನನಗೆ ಗೊತ್ತಿಲ್ಲ, ಅದು ಬೇರೆ ವಿಷಯ. ಅವರು ಕನ್ನಡದ ಬರಹಗಾರ್ತಿ ಮತ್ತು ಸಾಹಿತಿ. ಕನ್ನಡದ ಬಗ್ಗೆ ಅವರಿಗೆ ಅಭಿಮಾನ, ಪ್ರೀತಿ, ಆಸಕ್ತಿ ಇಲ್ಲದಿದ್ದರೆ ಆ ಭಾಷೆಯಲ್ಲಿ ಬರೆಯಲು ಆಗುತ್ತದೆಯೆ ಎಂದು ಕೇಳಿದರು.
ಬಾನು ಮುಷ್ತಾಕ್ ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಮ್ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು.
ಮುಸ್ಲಿಂ ಗುರುಗಳು ಬಾನು ಮುಷ್ತಾಕ್ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…