Featured

ಬಾಬರಿ ಮಸೀದಿ ಧ್ವಂಸವಾಗಲು ಕಾಂಗ್ರೆಸ್ ಕೂಡಾ ಹೊಣೆಯಾಗಿದೆ ,ರಾಜೀವ್ ಗಾಂಧಿ ಸಕಾಲಿಕ ಕ್ರಮ ಕೈಗೊಂಡಿದ್ದರೆ ಆಗ ಸಮಸ್ಯೆಗೆ ಪರಿಹಾರ ದೊರಕುತ್ತಿತ್ತು : ಅಸಾದುದ್ದೀನ್ ಉವೈಸಿ -Vishwanews24

ಹೈದರಾಬಾದ್,: ಬಾಬರಿ ಮಸೀದಿ ಧ್ವಂಸವಾಗಲು ಕಾಂಗ್ರೆಸ್ ಕೂಡಾ ಹೊಣೆಯಾಗಿದೆ ಎಂದು ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್ ಉವೈಸಿ ಹೇಳಿದ್ದಾರೆ.

‘ಬಾಬರಿ ಮಸೀದಿಯ ಬೀಗ ತೆರೆಸಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿ’ ಎಂಬ ಮಾಜಿ ಕೇಂದ್ರ ಸಚಿವ ಮಾಧವ ಗೋಡ್ಬೋಲೆಯವರ ಹೇಳಿಕೆಯನ್ನು ಅನುಮೋದಿಸಿದ ಉವೈಸಿ, ‘ಇದೊಂದು ಚಾರಿತ್ರಿಕ ಘಟನೆಯಾಗಿದೆ. ಆದರೆ ಬಾಬರಿ ಮಸೀದಿಯ ಬೀಗ ತೆರೆಸಿರುವುದಕ್ಕೂ ಶಾ ಬಾನೊ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅದೂ ಕೂಡಾ (ಶಾಬಾನೊ ಪ್ರಕರಣ) ಚಾರಿತ್ರಿಕ ಘಟನೆ’ ಎಂದು ಹೇಳಿದರು.

ಬಾಬ್ರಿ ಮಸೀದಿ ಧ್ವಂಸವಾದ ಸಂದರ್ಭದಲ್ಲಿ ಗೋಡ್ಬೋಲೆ ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಬಾಬ್ರಿ ಮಸೀದಿಯ ಬೀಗವನ್ನು ತೆರೆಸಿದವರು ದಿವಂಗತ ಪ್ರಧಾನಿ ರಾಜೀವ ಗಾಂಧಿ. ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ ಕಾರ್ಯ ನಡೆದಿತ್ತು. ಆದ್ದರಿಂದ ಅವರನ್ನು ಎರಡನೇ ಕರಸೇವಕ ಎಂದು ಕರೆಯಲು ಬಯಸುತ್ತೇನೆ. ಈ ಎಲ್ಲಾ ಘಟನೆ ನಡೆಯಲು ಅವಕಾಶ ಮಾಡಿಕೊಟ್ಟ ಜಿಲ್ಲಾಧಿಕಾರಿ ಮೊದಲ ಕರಸೇವಕ ಎಂದು ಗೋಡ್ಬೋಲೆ ಟ್ವೀಟ್ ಮಾಡಿದ್ದರು.

ರಾಜೀವ್ ಗಾಂಧಿ ಸಕಾಲಿಕ ಕ್ರಮ ಕೈಗೊಂಡಿದ್ದರೆ ಆಗ ಸಮಸ್ಯೆಗೆ ಪರಿಹಾರ ದೊರಕುತ್ತಿತ್ತು. ಯಾಕೆಂದರೆ ಆಗ ಎರಡೂ ಕಡೆಯಲ್ಲಿ ರಾಜಕೀಯ ನಿಲುವು ಬಲವರ್ಧನೆಗೊಂಡಿರಲಿಲ್ಲ. ಕೊಡು-ಕೊಳ್ಳುವ ಸೂತ್ರದ ಅನ್ವಯ ಎಲ್ಲರಿಗೂ ಒಪ್ಪಿಗೆಯಾಗುವ ಪರಿಹಾರ ಕಂಡುಕೊಳ್ಳಬಹುದಿತ್ತು ಎಂದು ಗೋಡ್ಬೋಲೆ ಹೇಳಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago