Featured

ಬಾಬರಿ ಮಸೀದಿ ಧ್ವಂಸವಾಗಲು ಕಾಂಗ್ರೆಸ್ ಕೂಡಾ ಹೊಣೆಯಾಗಿದೆ ,ರಾಜೀವ್ ಗಾಂಧಿ ಸಕಾಲಿಕ ಕ್ರಮ ಕೈಗೊಂಡಿದ್ದರೆ ಆಗ ಸಮಸ್ಯೆಗೆ ಪರಿಹಾರ ದೊರಕುತ್ತಿತ್ತು : ಅಸಾದುದ್ದೀನ್ ಉವೈಸಿ -Vishwanews24

ಹೈದರಾಬಾದ್,: ಬಾಬರಿ ಮಸೀದಿ ಧ್ವಂಸವಾಗಲು ಕಾಂಗ್ರೆಸ್ ಕೂಡಾ ಹೊಣೆಯಾಗಿದೆ ಎಂದು ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್ ಉವೈಸಿ ಹೇಳಿದ್ದಾರೆ.

‘ಬಾಬರಿ ಮಸೀದಿಯ ಬೀಗ ತೆರೆಸಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿ’ ಎಂಬ ಮಾಜಿ ಕೇಂದ್ರ ಸಚಿವ ಮಾಧವ ಗೋಡ್ಬೋಲೆಯವರ ಹೇಳಿಕೆಯನ್ನು ಅನುಮೋದಿಸಿದ ಉವೈಸಿ, ‘ಇದೊಂದು ಚಾರಿತ್ರಿಕ ಘಟನೆಯಾಗಿದೆ. ಆದರೆ ಬಾಬರಿ ಮಸೀದಿಯ ಬೀಗ ತೆರೆಸಿರುವುದಕ್ಕೂ ಶಾ ಬಾನೊ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅದೂ ಕೂಡಾ (ಶಾಬಾನೊ ಪ್ರಕರಣ) ಚಾರಿತ್ರಿಕ ಘಟನೆ’ ಎಂದು ಹೇಳಿದರು.

ಬಾಬ್ರಿ ಮಸೀದಿ ಧ್ವಂಸವಾದ ಸಂದರ್ಭದಲ್ಲಿ ಗೋಡ್ಬೋಲೆ ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಬಾಬ್ರಿ ಮಸೀದಿಯ ಬೀಗವನ್ನು ತೆರೆಸಿದವರು ದಿವಂಗತ ಪ್ರಧಾನಿ ರಾಜೀವ ಗಾಂಧಿ. ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ ಕಾರ್ಯ ನಡೆದಿತ್ತು. ಆದ್ದರಿಂದ ಅವರನ್ನು ಎರಡನೇ ಕರಸೇವಕ ಎಂದು ಕರೆಯಲು ಬಯಸುತ್ತೇನೆ. ಈ ಎಲ್ಲಾ ಘಟನೆ ನಡೆಯಲು ಅವಕಾಶ ಮಾಡಿಕೊಟ್ಟ ಜಿಲ್ಲಾಧಿಕಾರಿ ಮೊದಲ ಕರಸೇವಕ ಎಂದು ಗೋಡ್ಬೋಲೆ ಟ್ವೀಟ್ ಮಾಡಿದ್ದರು.

ರಾಜೀವ್ ಗಾಂಧಿ ಸಕಾಲಿಕ ಕ್ರಮ ಕೈಗೊಂಡಿದ್ದರೆ ಆಗ ಸಮಸ್ಯೆಗೆ ಪರಿಹಾರ ದೊರಕುತ್ತಿತ್ತು. ಯಾಕೆಂದರೆ ಆಗ ಎರಡೂ ಕಡೆಯಲ್ಲಿ ರಾಜಕೀಯ ನಿಲುವು ಬಲವರ್ಧನೆಗೊಂಡಿರಲಿಲ್ಲ. ಕೊಡು-ಕೊಳ್ಳುವ ಸೂತ್ರದ ಅನ್ವಯ ಎಲ್ಲರಿಗೂ ಒಪ್ಪಿಗೆಯಾಗುವ ಪರಿಹಾರ ಕಂಡುಕೊಳ್ಳಬಹುದಿತ್ತು ಎಂದು ಗೋಡ್ಬೋಲೆ ಹೇಳಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago