ಬಾರ್ಕೂರು: ಸಮಾಜಸೇವಕ, ಆರ್ಟಿಐ ಕಾರ್ಯಕರ್ತ ಬಾರ್ಕೂರು ಶಂಕರ ಶಾಂತಿಯವರಿಗೆ ಮಾರಣಾಂತಿಕ ಹಲ್ಲೆಯಾಗಿದ್ದು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸೋಮವಾರ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಸದಸ್ಯರು ನಾರಾಯಣ ಗುರು ಸಭಾಭವನದ ವಠಾರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಯವರು ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ ಆರ್ ಟಿ ಐ ಕಾರ್ಯಕರ್ತರಾದ ಶಂಕರ್ ಶಾಂತಿಯವರಿಗೆ ಫೆಬ್ರವರಿ 20 ರಂದು ಕೆಲ ದುಷ್ಕರ್ಮಿ ಗಳು ಸೇರಿ ಹಲ್ಲೆ ನಡೆಸಿದ್ದು ತಕ್ಷಣ ಆರೋಪಗಳನ್ನು ಬಂಧಿಸುವಂತೆ ಒತ್ತಾಯಿಸಿದರು.
ಮಂಗಳೂರು :ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತಿಬ್ಬರು ಪೊಲೀಸರ ಅಮಾನತು -Vishwanews24
ಹಲ್ಲೆ ಮಾಡಿದವರ ಮೇಲೆ ಈಗಾಗಲೇ ಎಫ್.ಐ.ಆರ್ ದಾಖಲಾಗಿದ್ದರೂ ಪೋಲಿಸ್ ಇಲಾಖೆ ಅವರನ್ನು ಬಂಧನ ಮಾಡಿಲ್ಲ. ಅವರು ಸಮಾಜದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಶಂಕರ್ ಅವರಿಗೆ ಹಲ್ಲೆ ಮಾಡಿದ ಪರಿಣಾಮ ಇಂದು ಅವರ ಕುಟುಂಬ ಬೀದಿಗೆ ಬೀಳುವ ಸ್ಥಿತಿಯಲ್ಲಿದೆ. ಹಲ್ಲೆ ಯಿಂದ ಅವರ ಮೂಳೆಗೆ ಪೆಟ್ಟಾಗಿದ್ದು ಮುಂದೆ ಕೆಲಸ ಮಾಡುವ ಸ್ಥಿತಿಯಲ್ಲಿ ಇಲ್ಲ. ಇಷ್ಟಾಗಿಯೂ ಪೋಲಿಸ್ ಇಲಾಖೆ ಪ್ರಕರಣಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇನ್ನರೆಡು ದಿನದಲ್ಲಿ ಆರೋಪಗಳನ್ನು ಬಂಧಿಸದಿದ್ದರೆ ಬಿಲ್ಲವ ಸಮುದಾಯದ ಜನರನ್ನು ಒಗ್ಗೂಡಿಸಿ ತೀವ್ರ ಪ್ರತಿಭಟನೆ ಗೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಆಳುಪ ಮನೆತನದ ವಂಶಸ್ಥರಾದ ಡಾ ಅಶೋಕ್ ರಾಜ್ ಜೈನ್ ಮಾತನಾಡಿ, ‘ಶಂಕರ್ ಶಾಂತಿಯವರು ಎಂದೂ ಒಂದು ಧರ್ಮ ಅಥವಾ ಸಮುದಾಯದ ವಿರುದ್ಧ ದನಿ ಎತ್ತಿದವರಲ್ಲ. ರಸ್ತೆ ಸಾರಿಗೆ ಸುರಕ್ಷತೆ ವಿಷಯ, ಕಾಂಕ್ರೀಟ್ ರಸ್ತೆ ಕಳಪೆ ವಿಷಯ, ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು, ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರವನ್ನು ಬಯಲಿಗೆಳೆದಿದ್ದರು.
ರಾಹುಲ್ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು : ಎಂ.ವೀರಪ್ಪ ಮೊಯ್ಲಿ -Vishwanews24
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಡಿವೈಎಸ್ಪಿ ಸದಾನಂದ ನಾಯ್ಕ’ರಿಗೆ
ಮನವಿಯನ್ನು ಹಸ್ತಾಂತರಿಸಲಾಯಿತು. ಡಿವೈ ಎಸ್ಪಿ ಆರೋಪಿಗಳನ್ನು ವಿರುದ್ಧ ತನಿಖಾಧಿವರಿಗೆ ಕ್ರಮಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಯವರು ಸೂಚನೆ ನೀಡಿದ್ದು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…