ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ”. ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣದ ಉಪನಿರ್ದೇಶಕರು, ಕಾರ್ಮಿಕ ಇನ್ಸ್ಪೆಕ್ಟರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿಯನ್ನು ನೀಡಲಾಯಿತು.
ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು, ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ ಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಯೂನಿಟ್ ನಾಯಕರುಗಳಾದ ನೌಫಾಲ್, ತಾಬಿಷ್ ಮತ್ತು ಸದಸ್ಯರಾದ ಅದ್ನಾನ್, ನಿಹಾದ್ ಮತ್ತು ಅಮಾನ್ ಉಪಸ್ಥಿತರಿದ್ಧರು.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…