ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ”. ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣದ ಉಪನಿರ್ದೇಶಕರು, ಕಾರ್ಮಿಕ ಇನ್ಸ್ಪೆಕ್ಟರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿಯನ್ನು ನೀಡಲಾಯಿತು.
ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು, ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ ಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಯೂನಿಟ್ ನಾಯಕರುಗಳಾದ ನೌಫಾಲ್, ತಾಬಿಷ್ ಮತ್ತು ಸದಸ್ಯರಾದ ಅದ್ನಾನ್, ನಿಹಾದ್ ಮತ್ತು ಅಮಾನ್ ಉಪಸ್ಥಿತರಿದ್ಧರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…