ಮುಂಬೈ: ಬಾಲಿವುಡ್ನಲ್ಲಿ ಹಲವಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕ ಭೂಪಿಂದರ್ ಸಿಂಗ್(82) ಅವರು ನಿಧನರಾಗಿದ್ದಾರೆ.
ಕರುಳಿನ ಕ್ಯಾನ್ಸರ್ನಿಂದ ಬಳಲುತ್ತಿದ್ದ ಭೂಪಿಂದರ್ ಸಿಂಗ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ 7.45ರ ಸುಮಾರಿಗೆ ಭೂಪಿಂದರ್ ಸಿಂಗ್ ಸಾವನ್ನಪ್ಪಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆಯನ್ನು ನಡೆಸುವುದಾಗಿ ಪತ್ನಿ ಮಿತಾಲಿ ಸಿಂಗ್ ತಿಳಿಸಿದ್ದಾರೆ.
ನಾಮ್ ಗಮ್ ಜಾಯೆಗಾ.., ಹೋತಾ ಪೆ ಐಸಿ ಬಾತ್.., ಕಭಿ ಕಿಸಿ ಕೋ ಮುಕಮ್ಮಲ್ ಜಹಾ ನಹಿ ಮಿಲ್ತಾ.. ಸೇರಿ ಇನ್ನೂ ಹಲವು ಸೂಪರ್ ಹಿಟ್ ಗೀತೆಗಳು ಭೂಪಿಂದರ್ ಸಿಂಗ್ ಅವರ ಕಂಠದಲ್ಲಿ ಮೂಡಿ ಬಂದಿದೆ. ಗಾಯನವನ್ನು ಹೊರತುಪಡಿಸಿ ಭೂಪಿಂದರ್ ಸಿಂಗ್ ಅವರು “ದಮ್ ಮಾರೋ ದಮ್”, “ಚುರಾ ಲಿಯಾ ಹೈ”, “ಚಿಂಗಾರಿ ಕೋಯಿ ಭಡ್ಕೆ” ಮತ್ತು “ಮೆಹಬೂಬಾ ಓ ಮೆಹಬೂಬಾ” ಸೇರಿದಂತೆ ಹಲವಾರು ಜನಪ್ರಿಯ ಹಾಡುಗಳಿಗೆ ಗಿಟಾರ್ ನುಡಿಸಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…