Featured

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಉದ್ಯಮಿಗೆ 60 ಕೋಟಿ ರೂ. ವಂಚನೆ ಆರೋಪ – vishwanews24

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಉದ್ಯಮಿಗೆ 60 ಕೋಟಿ ರೂ. ವಂಚನೆ ಆರೋಪ

ಮುಂಬೈ, : ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ವಿರುದ್ಧ ಆರೋಪ ಕೇಳಿಬಂದಿದೆ.

ಈ ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ ಎಂದು ನಟಿ ಹಾಗೂ ಪತಿ ವಿರುದ್ಧ ಆರೋಪ ಮಾಡಿದ್ದಾರೆ.

ಆರ್ಯ ಕಂಪನಿಗೆ ವಾರ್ಷಿಕ ಶೇ.12 ರಷ್ಟು ಬಡ್ಡಿದರದಲ್ಲಿ 75 ಕೋಟಿ ರೂ. ಸಾಲ ಕೇಳಿದ್ದರು. ಆದರೆ, ಹೆಚ್ಚಿನ ತೆರಿಗೆಗಳನ್ನು ತಪ್ಪಿಸಲು ಆ ಮೊತ್ತವನ್ನು ಹೂಡಿಕೆ ಎಂದು ಪರಿಗಣಿಸುವಂತೆ ಸೂಚಿಸಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ. ಸಭೆ ನಡೆಸಿ, ಹಣವನ್ನು ಸಮಯಕ್ಕೆ ಹಿಂದಿರುಗಿಸುವ ಭರವಸೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಕೊಠಾರಿ, 2015 ರ ಏಪ್ರಿಲ್‌ನಲ್ಲಿ ಮೊದಲ ಕಂತಿನ ಸುಮಾರು 31.95 ಕೋಟಿ ರೂ. ಕಳುಹಿಸಿದ್ದೆ. ಆದರೆ ತೆರಿಗೆ ಸಮಸ್ಯೆ ಹಾಗೆಯೇ ಉಳಿದು ಸೆಪ್ಟೆಂಬರ್‌ನಲ್ಲಿ ಎರಡನೇ ಒಪ್ಪಂದಕ್ಕೆ ಸಹಿ ಹಾಕಲಾಯಿತು. 2015 ಮಾರ್ಚ್‌ ಮತ್ತು 2016 ರ ಮಾರ್ಚ್‌ ನಡುವೆ ಅವರು 28.54 ಕೋಟಿ ರೂ. ವರ್ಗಾಯಿಸಿಕೊಂಡಿದ್ದರೆಂದು ಉದ್ಯಮಿ ತಿಳಿಸಿದ್ದಾರೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

31 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

37 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

44 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago