ಮುಂಬೈ: ಹಿರಿಯ ಬಾಲಿವುಡ್ ನಟ ಗೋವಿಂದ ಅವರು ಮಧ್ಯರಾತ್ರಿ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದು, ಅವರನ್ನು ಕೂಡಲೇ ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಕಾನೂನು ಸಲಹೆಗಾರ ಮತ್ತು ಸ್ನೇಹಿತ ಲಲಿತ್ ಬಿಂದಾಲ್ ತಿಳಿಸಿದ್ದಾರೆ.
ಗೋವಿಂದರ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಹಂಚಿಕೊಂಡಿರುವ ಬಿಂದಾಲ್, “ತಮ್ಮ ನಿವಾಸದಲ್ಲಿ ಸಂಜೆ ವೇಳೆಗೆ ಮೂರ್ಛೆ ಹೋಗಿದ್ದ ಗೋವಿಂದ, ಕೂಡಲೇ ನನಗೆ ಕರೆ ಮಾಡಿದರು. ತಕ್ಷಣವೇ ಅಲ್ಲಿಗೆ ಧಾವಿಸಿದ ನಾನು, ಅವರನ್ನು ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಿದ್ದೇನೆ. ಸದ್ಯ ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು, ಕೆಲವು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ” ಎಂದು ಹೇಳಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲೂ ಗೋವಿಂದರ ಆರೋಗ್ಯ ಸ್ಥಿತಿಯನ್ನು ಹಂಚಿಕೊಂಡಿರುವ ಬಿಂದಾಲ್, “ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನನ್ನ ಪ್ರೀತಿಯ ಗೋವಿಂದರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆದಷ್ಟೂ ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…