ಮುಂಬೈ: ಹಿರಿಯ ಬಾಲಿವುಡ್ ನಟ ಗೋವಿಂದ ಅವರು ಮಧ್ಯರಾತ್ರಿ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದು, ಅವರನ್ನು ಕೂಡಲೇ ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಕಾನೂನು ಸಲಹೆಗಾರ ಮತ್ತು ಸ್ನೇಹಿತ ಲಲಿತ್ ಬಿಂದಾಲ್ ತಿಳಿಸಿದ್ದಾರೆ.
ಗೋವಿಂದರ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಹಂಚಿಕೊಂಡಿರುವ ಬಿಂದಾಲ್, “ತಮ್ಮ ನಿವಾಸದಲ್ಲಿ ಸಂಜೆ ವೇಳೆಗೆ ಮೂರ್ಛೆ ಹೋಗಿದ್ದ ಗೋವಿಂದ, ಕೂಡಲೇ ನನಗೆ ಕರೆ ಮಾಡಿದರು. ತಕ್ಷಣವೇ ಅಲ್ಲಿಗೆ ಧಾವಿಸಿದ ನಾನು, ಅವರನ್ನು ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಿದ್ದೇನೆ. ಸದ್ಯ ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು, ಕೆಲವು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ” ಎಂದು ಹೇಳಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲೂ ಗೋವಿಂದರ ಆರೋಗ್ಯ ಸ್ಥಿತಿಯನ್ನು ಹಂಚಿಕೊಂಡಿರುವ ಬಿಂದಾಲ್, “ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನನ್ನ ಪ್ರೀತಿಯ ಗೋವಿಂದರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆದಷ್ಟೂ ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…