Featured

ಬಾಲಿವುಡ್ ‘ನಟ ರವೀಂದ್ರ ಬೆರ್ಡೆ’ ಹೃದಯಾಘಾತದಿಂದ ನಿಧನ – vishwanews24

ಬಾಲಿವುಡ್ ‘ನಟ ರವೀಂದ್ರ ಬೆರ್ಡೆ’ ಹೃದಯಾಘಾತದಿಂದ ನಿಧನ

ಮುಂಬೈ : ಮರಾಠಿ ಹಾಗೂ ಹಿಂದಿ ಚಿತ್ರರಂಗದ ಜನಪ್ರಿಯ ಹೆಸರು ರವೀಂದ್ರ ಬೆರ್ಡೆ 78ನೇ ವಯಸ್ಸಿನಲ್ಲಿ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.

ಬೆರ್ಡೆ ಅವರು ಅನಿಲ್ ಕಪೂರ್ ಮತ್ತು ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ಬಾಲಿವುಡ್ ನಟರೊಂದಿಗೆ ಕ್ರಮವಾಗಿ ನಾಯಕ್, ದಿ ರಿಯಲ್ ಹೀರೋ ಮತ್ತು ಸಿಂಗಂ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಇದಲ್ಲದೆ, ಅವರು ಅಶೋಕ್ ಸರಾಫ್, ವಿಜಯ್ ಚವಾಣ್, ವಿಜೂ ಖೋಟೆ ಮತ್ತು ಮಹೇಶ್ ಕೊಠಾರೆ ಮುಂತಾದ ಜನಪ್ರಿಯ ಹೆಸರುಗಳೊಂದಿಗೆ 300 ಕ್ಕೂ ಹೆಚ್ಚು ಮರಾಠಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

1995 ರಲ್ಲಿಯೂ ಇವರು ಹೃದಯಾಘಾತಕ್ಕೆ ಒಳಗಾಗಿದ್ದರು. 2011 ರಲ್ಲಿ, ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಆದರೆ ಅದರ ನಡುವೆಯೂ ಅವರು ಪ್ರೇಕ್ಷಕರನ್ನು ರಂಜಿಸುವುದನ್ನು ಮುಂದುವರೆಸಿದರು. ರವೀಂದ್ರ ಅವರ ಹಾಸ್ಯ ಪಾತ್ರಗಳು ಬಹಳ ಜನಪ್ರಿಯವಾಗಿದ್ದವು.

ರವೀಂದ್ರ ಬೆರ್ಡೆ ಅವರು ಪತ್ನಿ, ಇಬ್ಬರು ಮಕ್ಕಳು, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago