Featured

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ -Vishwanews24

ಮುಂಬಯಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜವಡೇಕರ್ ಅವರು ಟ್ವಿಟ್ಟರ್ ಮೂಲಕ ಈ ವಿಷಯ ಪ್ರಕಟ ಮಾಡಿದ್ದು, ಅಮಿತಾಭ್ ಬಚ್ಚನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಸುಮಾರು ನಾಲ್ಕು ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ ಅಮಿತಾಭ್ ಬಚ್ಚನ್ ನೀಡಿರುವ ಕೊಡುಗೆಯನ್ನ ಗೌರವಿಸಿ ಈ ಪ್ರಶಸ್ತಿ ನೀಡಲಾಗಿದೆ. ಬಿಗ್-ಬಿ ಅವರಿಗೆ ಈಗಾಗಲೇ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಸಿಕ್ಕಿದೆ. ಈಗ ದಾದಾ ಸಾಹೇಬ್ ಫಾಲ್ಕೆ ಕೂಡ ಅವರ ಮುಡಿಗೇರಿದೆ.

1961ರಲ್ಲಿ ‘ಸಾಥ್ ಹಿಂದೂಸ್ತಾನಿ’ ಚಿತ್ರದಲ್ಲಿ ನಟಿಸುವ ಮೂಲಕ ಅಮಿತಾಭ್ ಬಚ್ಚನ್ ಮೊದಲ ಬಾರಿಗೆ ಬೆಳ್ಳಿತೆರೆ ಪ್ರವೇಶ ಮಾಡಿದರು. ಅಲ್ಲಿಂದ ಆರಂಭವಾದ ಸಿನಿಜರ್ನಿ ನಾಲ್ಕು ದಶಕಗಳ ಕಾಲ ಮುಂದುವರಿದಿದೆ. ಹತ್ತಾರು ಪಾತ್ರಗಳು, ಹತ್ತಾರು ಕಥೆಗಳು, ಹತ್ತಾರು ಗೆಟಪ್ ಗಳ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ.

76ನೇ ವಯಸ್ಸಿನಲ್ಲಿ ವಿಭಿನ್ನ ಪಾತ್ರಗಳನ್ನ ಮಾಡುತ್ತಾ ಈಗಲೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಹಿಂದಿ ಚಿತ್ರರಂಗದ ದಂತಕಥೆಯಾಗಿರುವ ಬಿಗ್ ಬಿ ಅವರಿಗೆ ಇದುವೆರಗೂ ನಾಲ್ಕು ರಾಷ್ಟ್ರ ಪ್ರಶಸ್ತಿ (ಅಗ್ನಿಪತ್, ಪೀಕು, ಪಾ, ಬ್ಲಾಕ್ ಚಿತ್ರಗಳಿಗೆ) ಲಭಿಸಿದೆ.

2019ನೇ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿದ್ದ ಬದ್ಲಾ ಚಿತ್ರದಲ್ಲಿ ಅಮಿತಾಭ್ ಕೊನೆಯದಾಗಿ ನಟಿಸಿದ್ದರು. ಸದ್ಯ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿದ್ದಾರೆ. ಅದರ ಜೊತೆಗೆ ಸಾಕಷ್ಟು ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಿದ್ದಾರೆ. ಕಿರುತೆರೆಯಲ್ಲಿ ಕೌನ್ ಬನೆಗಾ ಕರೋಡ್ ಪತಿ ಶೋ ನಿರೂಪಣೆ ಮಾಡುತ್ತಿದ್ದಾರೆ.

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago